ಕೆಬಿಜೆಎನ್ಎಲ್ ಅಧಿಕಾರಿಗಳಿಗೆ ನೂತನ ವಾಹನಗಳ ವಿತರಿಸಿದ ಸಚಿವ ಗೋವಿಂದ ಕಾರಜೋಳ

ವಿಜಯಪುರ: ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಅಧೀನದಲ್ಲಿ ಬರುವ ವಲಯ, ವೃತ್ತ ವಿಭಾಗ ಹಾಗೂ ಉಪ ವಿಭಾಗ ಕಚೇರಿಗಳಿಗೆ ಮತ್ತು ಪುನರ್ವಸತಿ ಮತ್ತು ಪುನರ್‍ನಿಮಾಣ ಹಾಗೂ ಭೂಸ್ವಾಧೀನಾಧಿಕಾರಿಗಳ ಕಚೇರಿಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಅವರು ನೂತನ ಬೊಲೆರೋ ವಾಹನಗಳನ್ನು ವಿತರಿಸಿದರು.

ನಗರದ ಅಥಣಿ ರಸ್ತೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ನಡೆದ ವಾಹನ ವಿತರಣಾ ಕಾರ್ಯಕ್ರಮದಲ್ಲಿ ಸಚಿವ ಗೋವಿಂದ ಕಾರಜೋಳ ಅವರು ಕಾರ್ಯಕ್ರಮಕ್ಕೆ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಾನಾ ಅಧಿಕಾರಿಗಳಿಗೆ ವಾಹನಗಳ ಕೀಯನ್ನು ವಿತರಿಸುವ ಮೂಲಕ ವಾಹನ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಆಲಮಟ್ಟಿ ಕೆಬಿಜೆಎನ್‍ಎಲ್ ಚೀಫ್ ಎಂಜಿನಿಯರ್ ಸುರೇಶ ಎಚ್., ಸುಪರಿಂಟೆಂಡೆಂಟ್ ಎಂಜಿನಿಯರ್ ಬಸವರಾಜ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌