ವಿಜಯಪುರದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ಉದ್ಘಾಟನೆ

ವಿಜಯಪುರ: ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಎದುರು ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ಉದ್ಘಾಟನೆ ಸಮಾರಂಭ ನಡೆಯಿತು.

ಶ್ರೀ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಜಿ ಮತ್ತು ಶ್ರೀ ಚಂದ್ರಶೇಖರ ಶಿವಾಚಾರ್ಯರ ಸ್ವಾಮಿಜಿ ಸಂಘವನ್ನು ಉದ್ಘಾಟಿಸಿದರು.

ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಅಂಗವಾಗಿ ನಡೆದ ಈ ಕಾರ್ಯಕರ್ಮದಲ್ಲಿ ಮಾತನಾಡಿ ಸಂಘದ ಅಧ್ಯಕ್ಷ ಚಿದಾನಂದ ಹಿರೇಮಠ, ಮುಂಬರುವ ದಿನಗಳಲ್ಲಿ ನಗರದ ನಾನಾ ಕಡೆ ವೈದಿಕ ಸಂಸ್ಕಾರ ಶಿಬಿರಗಳನ್ನು ಮಾಡಲಗಾವುದು.  ಸಾಮಾಜಿಕ ಮತ್ತು ಧಾರ್ಮಿಕ ಸೇವೆ ಮಾಡುವುದು ಸಂಘದ ಉದ್ಧೇಶವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ, ಮುಖಂಡರಾದ ಗುರು ಗಚ್ಚಿನಮಠ, ಸಚೀನ ಬೂದಿಹಾಳಮಠ, ಮಂಜುನಾಥ ಹಿರೇಮಠ, ಸಚೀನ ಮಠಪತಿ, ಜಗದೀಶ ಹಿರೇಮಠ, ಅರವಿಂದ ಜಿರಲಿಮಠ ಮುಂತಾದವರು ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಸಿದ್ಧರಾಮೇಶ್ವರ ಹಿರೇಮಠ ನಿರೂಪಿಸಿದರು.

Leave a Reply

ಹೊಸ ಪೋಸ್ಟ್‌