ಸಿಇಎನ್ ಪೊಲೀಸರ ಕಾರ್ಯಾಚರಣೆ- ಗಾಂಜಾ ಮಾರಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ- ರೂ. 5 ಲಕ್ಷ ಮೌಲ್ಯದ ಗಾಂಜಾ, ಕಾರು ವಶ

ವಿಜಯಪುರ: ಧಾಬಾದಲ್ಲಿ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಜಯಪುರ ಸಿಇಎನ್ ಅಪರಾಧ ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸೋನಕನಹಳ್ಳಿ ಬಳಿ ಎನ್. ಎಚ್. 52ರಲ್ಲಿ ಬರುವ ಸಾಗರ ಧಾಭಾದ ಬಳಿ ಧಾಳಿ ನಡೆಸಿದ ಸಿಇಎನ್ ಸಿಪಿಐ ಸಂಜೀವ ಕಾಂಬಳೆ ಮತ್ತು ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿ ರೂ. 5 ಲಕ್ಷ ಮೌಲ್ಯದ 70 ಕೆಜಿ ಗಾಂಜಾ, ರೂ. 5 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿಸಲಾದ ಆರೋಪಿಗಳನ್ನು ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ದಕ್ಷಿಣ ಸೋಲಾಪುರ ತಾಲೂಕಿನ ಬರೂರ ಗ್ರಾಮದ ಮುಕ್ತಿಯಾರ ಅಹ್ಮದ್ ನಿಸಾರ ಕೂಡ್ಲೆ(43), ದಕ್ಷಿಣ ಸೋಲಾಪುರ ತಾಲೂಕಿನ ಔರಾದ ಗ್ರಾಮದ ಸದ್ದಾಂ ಮುಕ್ತುಮ್ ಮುಲ್ಲಾ(32) ಎಂದು ಗುರುತಿಸಲಾಗಿದೆ.

ಈ ಕುರಿತು ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಿಜಯಪುರ ಎಸ್ಪಿ ಎಚ್. ಡಿ. ಆನಂದಕುಮಾರ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Leave a Reply

ಹೊಸ ಪೋಸ್ಟ್‌