ವಿಜಯಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಕ್ಷಗಳು ಗಾಣಿಗ ಸಮಾಜಕ್ಕೆ ಟಿಕೆಟ್ ನೀಡಲು ಸಮಾಜ ಮುಖಂಡರ ಆಗ್ರಹ

ವಿಜಯಪುರ: ವಿಜಯಪುರ ಜಿಲ್ಲೆಯ ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ ಒಂದು ಮೀಸಲು ಕ್ಷೇತ್ರ ಹೊರತು ಪಡಿಸಿ ಇತರೆ ಕ್ಷೇತ್ರಗಳಲ್ಲಿ ಗಾಣಿಗ ಸಮಾಜಕ್ಕೆ ರಾಷ್ಟ್ರೀಯ ಪಕ್ಷಗಳು ಟಿಕೆಟ್ ನೀಡಬೇಕು ಎಂದು ಗಾಣಿಗರ ಸಮಾಜದ ಮುಖಂಡ ಎಂ. ಎಸ್. ಶಿರಾಡೋಣ ಹೇಳಿದರು.

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗಾಣಿಗ ಸಮುದಾಯದ ಜನಸಂಖ್ಯೆ ಹಾಗೂ ಮತದಾರರು ಹೆಚ್ಚಿನ ಪ್ರಮಾಣದಲ್ಲಿದೆ. ರಾಷ್ಟ್ರೀಯ ಪಕ್ಷಗಳು ಸಮುದಾಯದ ನಾಯಕರಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗಾಣಿಗ ಸಮಾಜದ ಜಿಲ್ಲಾ ಕಾರ್ಯಾಧ್ಯಕ್ಷ ಡಾ. ಅಶೋಕ ತರಡಿ, ಜಿಲ್ಲಾಧ್ಯಕ್ಷ ಬಿ. ಬಿ. ಪಾಸೋಡಿ, ಸºಕಾರ್ಯದರ್ಶಿ ಎಸ್. ಬಿ. ಪುಟ್ಟಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌