ಆರೋಗ್ಯ ಸೌಧ ಕಾಮಗಾರಿ ಪರಿಶೀಲನೆ ನಡೆಸಿದ ಜಿ. ಪಂ. ಸಿಇಓ ರಾಹುಲ್ ಶಿಂಧೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ಕಾರ್ಯಾಲಯದ ಆವರಣದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಆರೋಗ್ಯ ಸೌಧ ಕಾಮಗಾರಿಯನ್ನು ವೀಕ್ಷಿಸಿದರು.

ಹಳೆಯ ಕಟ್ಟಡ ನಿಯಮಾನುಸಾರ ನೆಲಸಮಗೊಳಿಸಬೇಕು.  ಕಚೇರಿ ಆವರಣ, ಜಿಲ್ಲಾ ಮಧ್ಯಸ್ಥಿಕೆ ಕೇಂದ್ರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು.  ರೆಡಸ್ ರಕ್ತನಿಧಿ ಕೇಂದ್ರದಲ್ಲಿ 1000 ರಕ್ತದ ಯುನಿಟ್ ಗಳ ಸಂಗ್ರಹಣೆಯ ಸಾಮಥ್ರ್ಯವಿದ್ದು, ಈಗ 80 ರಿಂದ 100 ರಕ್ತದ ಯುನಿಟ್ ಗಳನ್ನು ಮಾತ್ರ ಪ್ರತಿ ತಿಂಗಳು ಸಂಗ್ರಹಿಸಲಾಗುತ್ತಿದೆ. ಈ ಪ್ರಮಾಣವನ್ನು ಹೆಚ್ಚಿಸಲು  ರಕ್ತದಾನ ಶಿಬಿರವನ್ನು ಆಯೋಜಿಸಿ, ಪ್ರತಿ ತಿಂಗಳು 1000 ಯೂನಿಟ್ ರಕ್ತ ಸಂಗ್ರಹಣೆ ಮಾಡಿ ಶೇಖರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಜಯಪುರ ಜಿ. ಪಂ. ಸಿಇಓ ರಾಹುಲ ಶಿಂಧೆ ಆರೋಗ್ಯ ಸೌಧ ಕಾಮಗಾರಿ ಪರಿಶೀಲನೆ ನಡೆಸಿದರು

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಕುಮಾರ ಯರಗಲ, ಸಂತಾನೊತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ. ಕೆ. ಡಿ. ಗುಂಡಬಾವಡಿ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ. ಜೈಬುನ್ನೀಸಾ ಬೀಳಗಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಸಂಪತ ಗುಣಾರಿ, ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ. ಎನ್. ಜಿ. ದೇಸಾಯಿ, ಕಚೇರಿ ಅಧೀಕ್ಷಕ ಹೇಮಂತ ಕುಲಕರ್ಣಿ ಸೇರಿದಂತೆ ನಾನಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌