ಕಥಕ್ ನೃತ್ಯವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ- ಲತಾ ಜಹಾಗೀರದಾರ

ವಿಜಯಪುರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಮತ್ತು ವಿಜಯಪುರದ ನವರಸ ನೃತ್ಯ ಕಲಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಕಥಕ್ ನೃತ್ಯ ತರಬೇತಿ ಶಿಬಿರ ನಗರದಲ್ಲಿ ನಡೆಯಿತು.  ಈ ಶಿಬಿರವನ್ನು ಶೇಷ ಘಟಕ ಯೋಜನೆ ಅಡಿಯಲ್ಲಿ ಗುರುಶಿಷ್ಯ ಪರಂಪರೆ ಅಂಗವಾಗಿ ಆಯೋಜಿಸಲಾಗಿದ್ದ ಈ ತರಬೇತಿ ಶಿಬಿರವನ್ನುಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ ಮಾಜಿ ಸತಸ್ಯೆ ಮತ್ತು ಖ್ಯಾತ ಸಂಗೀತ ಕಲಾವಿದೆ ಲತಾ ಜಾಗೀರದಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನೃತ್ಯ ಸರ್ವ ರೋಗಕ್ಕೂ ರಾಮಬಾಣವಿದ್ದಂತೆ.  ನೃತ್ಯದಿಂದ ನಮ್ಮ ದೇಹದ ಸರ್ವ ಅಂಗಾಂಗಗಳಿಗೂ […]

ಬಿ.ಎಲ್.ಡಿ. ಸೌಹಾರ್ದ ಸಹಕಾರ ಸಂಘದ ನೂತನ ಶಾಖೆ ಕಾರ್ಯಾರಂಭ

ವಿಜಯಪುರ: ಬಿಜಾಪುರ ಲಿಂಗಾಯತ ಡೆವಲೆಪಮೆಂಟ್ ಸೌಹಾರ್ದ ಸಂಘದ ನೂತನ ಶಾಖೆಯ ಉದ್ಘಾಟನೆ ಸಮಾರಂಭ ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಆವರಣದಲ್ಲಿ ನಡೆಯಿತು. ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ನೂತನ ಶಾಖೆಯನ್ನು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಸೌಹಾರ್ಧದ ಬಗ್ಗೆ ಮಾಹಿತಿ ಪಡೆದ ಅವರು, ಶುಭ ಕೋರಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ, ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, […]