ಬಿ.ಎಲ್.ಡಿ. ಸೌಹಾರ್ದ ಸಹಕಾರ ಸಂಘದ ನೂತನ ಶಾಖೆ ಕಾರ್ಯಾರಂಭ

ವಿಜಯಪುರ: ಬಿಜಾಪುರ ಲಿಂಗಾಯತ ಡೆವಲೆಪಮೆಂಟ್ ಸೌಹಾರ್ದ ಸಂಘದ ನೂತನ ಶಾಖೆಯ ಉದ್ಘಾಟನೆ ಸಮಾರಂಭ ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಆವರಣದಲ್ಲಿ ನಡೆಯಿತು.

ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ನೂತನ ಶಾಖೆಯನ್ನು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಸೌಹಾರ್ಧದ ಬಗ್ಗೆ ಮಾಹಿತಿ ಪಡೆದ ಅವರು, ಶುಭ ಕೋರಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ, ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ರಜಿಸ್ಟ್ರಾರ ಡಾ. ಆರ್. ವಿ. ಕುಲಕರ್ಣಿ, ಸಂಸ್ಥೆಯ ಹಣಕಾಸು ಅಧಿಕಾರಿ ಡಿ. ಕೆ. ಅಗರವಾಲ, ಡಾ. ರಾಜೇಶ ಹೊನ್ನುಟಗಿ, ಡಾ. ಎಂ. ಬಿ. ಪಾಟೀಲ, ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಡಾ. ವಿಜಯಕುಮಾರ ವಾರದ, ಡಾ. ರವಿ ಬಿರಾದಾರ, ಡಾ. ಉದಯಕುಮಾರ ನುಚ್ಚಿ, ಪ್ರೊ. ಜಿ. ಆರ್. ಅಂಬಲಿ, ಪ್ರೊ. ಎ. ಎ. ಕನಮಡಿ, ನಾನಾ ಕಾಲೇಜುಗಳ ಪ್ರಾಚಾರ್ಯರಾದ ಡಾ. ಸಂಜಯ ಕಡ್ಲಿಮಟ್ಟಿ, ಡಾ. ಎಂ. ಆರ್. ಮಿರ್ದೆ, ಡಾ. ಗಿರೀಶ ಡಿ. ಅಕಮಂಚಿ, ಡಾ. ಚೋರಮನ ಚೋಪಡೆ, ಪ್ರಕಾಶ ಸಿದ್ದಾಪುರ, ಡಾ. ಭಾರತಿ ಖಾಸನೀಸ, ಮಲ್ಲಣ್ಣ ಕುಪ್ಪಿ, ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ, ಎಸ್. ಎ. ಬಿರಾದಾರ(ಕನ್ನಾಳ), ಸೌಹಾರ್ದದ ಅಧಿಕಾರಿಗಳಾದ ಶಂಕರಗೌಡ ಪಾಟೀಲ, ಪಿ. ಕೆ. ಹುನ್ನೂರ, ವಿ. ಡಿ. ಕನಮಡಿ, ಎ. ಎಂ. ಕ್ಯಾಡಿ, ಎಸ್. ಕೆ. ಗೊಂಗಡಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌