ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಡದಿಂದಾಗಿ ಕಣ್ಣೀರಿಟ್ಟಿದ್ದಾರೆ- ಸಂಗಮೇಶ ಬಬಲೇಶ್ವರ

ವಿಜಯಪುರ: ಕೂಡಲಸಂಗಮ ಜಗದ್ಗುರುಗಳು ಕೆಲವರ ಒತ್ತಡ ತಾಳಲಾರದೆ ಕಣ್ಣೀರಿಟ್ಟಿದ್ದಾರೆ ಎಂದು ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ವಕ್ತಾರ ಸಂಗಮೇಶ ಬಬಲೇಶ್ವರ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ  ದೊರಕಿಸಿ ಕೊಡುವ ಮೂಲಕ ಸಮುದಾಯದ ಮಕ್ಕಳ ಶೈಕ್ಷಣಿಕ ಹಾಗೂ ಉದ್ಯೋಗದ ಮೀಸಲಾತಿಗಾಗಿ ಐತಿಹಾಸಿಕ ಹೋರಾಟ ಮಾಡಿದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳ ಕಣ್ಣೀರಿನ ಶಾಪ ಸಮುದಾಯವನ್ನು ಹಾಗೂ ಸಮುದಾಯದ ಜಗದ್ಗುರುಗಳನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡವರಿಗೆ ತಟ್ಟದೇ ಬಿಡುವುದಿಲ್ಲ ಎಂದು […]

ನಗರಾಭಿವೃದ್ದಿ ಪ್ರಾಧಿಕಾರದ ಬಜೆಟ್ ಸಭೆ- ರೂ. 17.72 ಕೋ. ಉಳಿತಾಯ ಆಯವ್ಯಯ ಮಂಡಿಸಿದ ಆಯುಕ್ತ ಶಂಕರಗೌಡ ಸೋಮನಾಳ

ವಿಜಯಪುರ: ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ 2023-24ನೇ ಆರ್ಥಿಕ ವರ್ಷದಲ್ಲಿ ರೂ. 17.72 ಕೋ. ಉಳಿತಾಯ ಬಜೆಟ್ ಮಂಡನೆಯಾಗಿದೆ. ವಿಜಯಪುರ ನಗರ ಅಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ನಡೆದ ಬಜೆಟ್ ಸಭೆಯಲ್ಲಿ ಆಯುಕ್ತ ಶಂಕರಗೌಡ ಸೋಮನಾಳ ಆಯವ್ಯಯ ಮಂಡಿಸಿದರು.  ಈ ಸಭೆಯಲ್ಲಿ ಒಟ್ಟು ಅಂದಾಜು ರೂ. 122. 60 ಕೋ. ಆದಾಯ ಕ್ರೋಢೀಕರಿಸಲು ಮತ್ತು ರೂ. 104.88 ಕೋ. ವೆಚ್ಚ ಮಾಡಲು ಅನುಮೋದನೆ ನೀಡಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಶಾಸಕ ಬಸನಗೌಡ […]