ಬಾಲಾಜಿ ಶುಗರ್ಸ್ ಮೇಲೆ ಎರಡನೇ ಬಾರಿ ಚುನಾವಣಾಧಿಕಾರಿಗಳ ಧಾಳಿ- ಸುಮಾರು ರೂ. 40 ಲಕ್ಷ ಮೌಲ್ಯದ ನಾನಾ ಗಿಫ್ಟ್ ಗಳು ವಶ

ವಿಜಯಪುರ: ಮುದ್ದೇಬಿಹಾಳ ತಾಲೂಕಿನ ಬಾಲಾಜಿ ಶುಗರ್ಸ್ ಕಾರ್ಖಾನೆಯ ಮೇಲೆ ಚುನಾವಣಾಧಿಕಾರಿಗಳು ಎರಡನೇ ಬಾರಿ ಧಾಳಿ ನಡೆಸಿದ್ದು, ಮತ್ತೆ ಸುಮಾರು ರೂ. 40 ಲಕ್ಷ ಮೌಲ್ಯದ ನಾನಾ ಗಿಫ್ಟ್ ಐಟಂ ಗಳು ಪತ್ತೆಯಾಗಿವೆ. 

ವಿಜಯಪುರ ಜಿಲ್ಲೆಯ ಬಾಲಾಜಿ ಶುಗರ್ಸ್ ಮೇಲೆ ಚುನಾವಣಾಧಿಕಾರಿಗಳು ಧಾಳಿ ನಡೆಸಿದರು

ಈ ಸಂದರ್ಭದಲ್ಲಿ ನೂರಾರು ಬಾಕ್ಸ್ ಗಳಲ್ಲಿ ಸಂಗ್ರಹಿಸಿ ಇಡಲಾಗಿದ್ದ ಗಿಫ್ಟ್ ಗಳನ್ನು ಪತ್ತೆ ಮಾಡಲಾಗಿದೆ.  ಮಾ. 27 ರಂದು ರೂ. 2. 10 ಕೋ. ಮೊತ್ತದ ಗಿಫ್ಟ್ ಗಳು ಪತ್ತೆಯಾಗಿದ್ದವು.  ಈ ವೇಳೆ, ಮಾಜಿ ಸಚಿವ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಎಸ್. ಆರ್. ಪಾಟೀಲ ಅವರ ಭಾವಚಿತ್ರ ಇರುವ ಗೋಡೆ ಗಡಿಯಾರ, ಟಿ- ಶರ್ಟ್ ಗಳು ಪತ್ತೆಯಾಗಿದ್ದವು.

ಈಗ ಮತ್ತೆ ಸುಮಾರು ರೂ.  40 ಲಕ್ಷ ಮೌಲ್ಯದ ಗಿಫ್ಟ್ ಗಳು ಪತ್ತೆಯಾಗಿವೆ.  ಈಗ ಇನ್ನಷ್ಟು ಗಿಫ್ಟ್‌ಗಾಗಿ ಹುಡುಕಾಟ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ, ಬಾಲಾಜಿ ಶುಗರ್ಸ್ ನಲ್ಲಿ ಸಿಕ್ಕಿರುವ ಗಿಫ್ಟ್ ವಸ್ತುಗಳನ್ನು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ, ಎಸ್ಪಿ ಎಚ್. ಡಿ. ಆನಂದಕುಮಾರ, ಜಿ. ಪಂ. ಸಿಇಓ ರಾಹುಲ ಶಿಂಧೆ, ಎಎಸ್ಪಿ ಶಂಕರ ಮಾರಿಹಾಳ, ಪಿ.ಎಸ್.ಐ ಆರೀಫ್ ಮುಷಾಪುರಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌