ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಸಖಿ , 1 ವಿಶೇಷ ಚೇತನ ಮತದಾರರ ಬೂತ ಸ್ಥಾಪನೆ- ಡಾ. ದಾನಮ್ಮನವರ

ವಿಜಯಪುರ: ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ 5‌ ಸಖಿ ಹಾಗೂ 1 ವಿಶೇಷ ಚೇತನ ಮತದಾರರ ಬೂತ್‍ಗಳನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ.‌ ದಾನಮ್ಮನವರ ಮಾಹಿತಿ ನೀಡಿದ್ದಾರೆ. ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ವೆಬ್‍ಕಾಸ್ಟಿಂಗ್‍ಗಾಗಿ ವಿಧಾನಸಭೆ ಕ್ಷೇತ್ರವಾರು 713 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಇನ್ನುಳಿದಂತೆ […]