ರೈತರನ್ನು ಕೃಷಿ ಉದ್ಯಮಿಗಳನ್ನಾಗಿ ಮಾಡುವ ಗುರಿ ಹೊಂದಿದ್ದೇವೆ- ಎಂ. ಬಿ. ಪಾಟೀಲ

ವಿಜಯಪುರ: ದೇಶಕ್ಕೆ ಅನ್ನ ನೀಡುವ ರೈತರನ್ನು ಕೃಷಿ ಉದ್ಯಮಿಗಳನ್ನಾಗಿ ಮಾಡುವ ಗುರಿ ಹೊಂದಿದ್ದೇವೆ ಎಂದು ಕೆ.ಪಿ.ಪಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಬಬಲೇಶ್ವರ ತಾಲೂಕಿನ ಹೆಬ್ಬಾಳಹಟ್ಟಿ, ಅರ್ಜುಣಗಿ, ಹೊಕ್ಕುಂಡಿ, ಯಕ್ಕುಂಡಿ, ನಾಗರಾಳ, ಕುಮಠೆ, ನಿಡೋಣಿ ಗ್ರಾಮಗಳಿಗೆ ಭೇಟಿ ನೀಡಿದ ಅವರು ಗ್ರಾಮಸ್ಥರೊಂದಿಗೆ ಮಾತನಾಡಿದರು. ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಗಳಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡಿ, ಮಾರುಕಟ್ಟೆಗಳಲ್ಲಿ ಹೆಚ್ಚಿನ ಬೇಡಿಕೆ ಇರುವ ಮತ್ತು ಈ ಭಾಗಕ್ಕೆ ಹೊಸದಾಗಿರುವ ವಾಣಿಜ್ಯ ಬೆಳೆಯ ತಳಿಗಳನ್ನು ರೈತರಿಗೆ ಪರಿಚಯಿಸಲಾಗುವುದು. […]