ಬಿ.ಎಲ್.ಡಿ.ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ವೈದ್ಯರಿಂದ ಇಬ್ಬರು ಮಕ್ಕಳಿಗೆ ಎ ಬಿ ಆರ್ ಕೆ ಯೋಜನೆಯಡಿ ಉಚಿತವಾಗಿ ಹೃದಯ ಶಸ್ತ್ರಚಿಕಿತ್ಸೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇμÁಲಿಟಿ ಆಸ್ಪತ್ರೆ ವೈದ್ಯರು ಜನ್ಮದಿನಂದಲೇ ಹೃದ್ರೋಗ ಸಮಸ್ಯೆ ಎದುರಿಸುತ್ತಿದ್ದ ಇಬ್ಬರು ಮಕ್ಕಳಿಗೆ ಆಯುμÁ್ಮನ್ ಭಾರತ- ಆರೋಗ್ಯ ಕರ್ನಾಟಕ ಸ್ಕೀಂ(ಎ ಬಿ ಆರ್ ಕೆ) ನಡಿ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.  

ಬಿ.ಎಲ್.ಡಿ.ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ಭೇಟಿ ನೀಡುವ ಮುಂಬೈನ ಜುಪಿಟರ್ ಆಸ್ಪತ್ರೆಯ ಕನ್ಸಲ್ಟೆಂಟ್ ಪಿಡಿಯಾಟ್ರಿಕ್ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್ ಡಾ. ಶ್ರೀನಿವಾಸ್ ಎಲ್ ಆರು ಮತ್ತು ಐದು ವರ್ಷ ಇಬ್ಬರು ಹೆಣ್ಣು ಮಕ್ಕಳಿಗೆ ಹುಟ್ಟಿನಿಂದಲೇ ಆರೋಗ್ಯ ಸಮಸ್ಯೆಗೆ ಕಾರಣವಾಗಿದ್ದ ಹೃದಯದಲ್ಲಿನ ರಂದ್ರಗಳನ್ನು ಶಸ್ತ್ರಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಮುಚ್ಚಿದ್ದಾರೆ.

ಬಿ.ಎಲ್.ಡಿ.ಇ ಸೂಪರ್ ಸ್ಪೇಷಾಲಿಟಿ ಕ್ಯಾಥ್ ಲ್ಯಾಬ್ನಲ್ಲಿ ಇದು ಮೊದಲ ಬಾರಿಗೆಈ  ಕಾರ್ಯ ವಿಧಾನದ ಮೂಲಕ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.  ಇದೀಗ ಇಬ್ಬರೂ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು, ವೈದ್ಯರು ಮತ್ತು ಪೆÇೀಷಕರಲ್ಲಿ ಸಂತ ಮೂಡಿಸಿದೆ.
ಎ.ಬಿ.ಆರ್.ಕೆ ಯೋಜನೆಯಡಿ ಈ ಶಸ್ತ್ರಚಿಕಿತ್ಸೆಗಳನ್ನು ನೀಡಲಾಗಿದ್ದು, ಮಕ್ಕಳು ಮತ್ತು ಅವರ ಪೆÇೀಷಕರ ಪಾಲಿಗೆ ಈ ಆರೋಗ್ಯ ವಿಮೆ ವರದಾನವಾಗಿದೆ.

ವಿಜಯಪುರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ

ವಿವಿಯ ಸಮಕುಲಾಧಿಪತಿ ಡಾ. ವೈ. ಎಂ. ಜೈರಾಜ್, ಉಪಕುಲಪತಿ ಡಾ. ಆರ್. ಎಸ್. ಮುಧೋಳ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಅವರ ಮಾರ್ಗದರ್ಶನದಲ್ಲಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಟಿ. ಕಲ್ಯಾಣಪ್ಪಗೋಳ ನೇತೃತ್ವದ ವೈದ್ಯರ ತಂಡ ಅರವಳಿಗೆ ನೀಡಿದರೆ, ಚಿಕ್ಕಮಕ್ಕಳ ತುರ್ತು ಚಿಕಿತ್ಸೆ ಘಟಕ(ಪಿಐಸಿಯು)ದ ಮುಖ್ಯಸ್ಖ ಡಾ. ಜೆ. ಪ್ರಕಾಶ, ಮಕ್ಕಳ ವಿಭಾಗದ ತಂಡ ಡಾ. ಎಸ್. ವಿ. ಪಾಟೀಲ, ಡಾ. ಎಸ್. ಎಸ್. ಕಲ್ಯಾಣಶೆಟ್ಟರ, ಡಾ. ಎಂ. ಎಂ. ಪಾಟೀಲ ಮತ್ತು ಸಿಬ್ಬಂದಿ ಈ ಶಸ್ತ್ರಚಿಕಿತ್ಸೆಯ ತಂಡದ ಭಾಗವಾಗಿ ಕಾರ್ಯ ನಿರ್ವಹಿಸಿದ್ದಾರೆ.

ವಿಶ್ವವಿದ್ಯಾಲಯದ ಕುಲಾಧಿಪತಿ ಎಂ. ಬಿ. ಪಾಟೀಲ ವಿಶೇಷ ಕಾಳಜಿಯಿಂದಾಗಿ ಬಿ. ಎಲ್. ಡಿ. ಇ ಸಂಸ್ಥೆಯಲ್ಲಿ ಇದೇ ಮೊದಲ ಬಾರಿಗೆ ಈ ಶಸ್ತ್ರಚಿಕಿತ್ಸೆ ನಡೆದಿದೆ.  ಭವಿಷ್ಯದಲ್ಲಿ ಮಕ್ಕಳಲ್ಲಿ ಜನ್ಮಜಾತ ಹೃದಯ ಸಂಬಂಧಿ ಕಾಯಿಲೆಗಳನ್ನು ನಿರ್ವಹಿಸಲು ಮತ್ತು ಆರೋಗ್ಯ ಯೋಜನೆಗಳ ಅಡಿಯಲ್ಲಿ ಉತ್ತರ ಕರ್ನಾಟಕದ ಬಡ ಮತ್ತು ನಿರ್ಗತಿಕರಿಗೆ ಗುಣಮಟ್ಟದ ಚಿಕಿತ್ಸೆ ಮತ್ತು ಆರೈಕೆ ಒದಗಿಸಲು ಈ ಆಸ್ಪತ್ರೆಯ ಪಣತೊಟ್ಟು ನಿಂತಿದೆ.

Leave a Reply

ಹೊಸ ಪೋಸ್ಟ್‌