ಚುನಾವಣೆ ಕಾರ್ಯದಲ್ಲಿ ಯಾವುದೇ ತಾಂತ್ರಿಕ ಅಡಚಣೆ ಉಂಟಾಗದಂತೆ ಅಗತ್ಯ ಕ್ರಮಕ್ಕೆ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ

ವಿಜಯಪುರ: ಚುನಾವಣೆ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ಅಡೆತಡೆ ಉಂಟಾಗದಂತೆ ಮತದಾನ ನಡೆಯುವ ದಿನದಂದು ವೆಬ್‍ಕಾಸ್ಟಿಂಗ್ ಸೇರಿದಂತೆ ಮತದಾನದ ಮಾಹಿತಿ ವಿವರಗಳನ್ನು ತತಕ್ಷಣದಲ್ಲಿ ನೀಡಲು ಯಾವುದೇ ಅಡೆತಡೆಯಾಗದಂತೆ ಏರ್‍ಟೆಲ್-ಜಿಯೋ ಸೇರಿದಂತೆ ಹೈಸ್ಪೀಡ್ ಇಂಟರ್‍ನೆಟ್ ಸೇವೆ ಸೌಲಭ್ಯ ಒದಗಿಸುವಂತೆ ಸೇವಾದಾರರಿಗೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ಜರುಗಿದ ಚುನಾವಣಾ ಕಾರ್ಯಕ್ಕೆ ನಿಯೋಜಿತ ನೋಡಲ್ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ, ಅವರು,ಜಿಲ್ಲೆಯಲ್ಲಿ ಒಟ್ಟು 2072 ಮತಗಟ್ಟೆ ಸ್ಥಾಪಿಸಲಾಗಿದೆ.ಚುನಾವಣಾ […]

ವಿಧಾನಸಭೆ ಚುನಾವಣೆ ಮತದಾನ ಬಹಿಷ್ಕರಿಸಲು ನಿರ್ಧರಿಸಿದ ವಿಜಯಪುರ ನಗರ ಮತಕ್ಷೇತ್ರದ ಸೌಭಾಗ್ಯ ನಗರ ಮತದಾರರು

ವಿಜಯಪುರ: ನಾನಾ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ವಿಜಯಪುರ ನಗರ ಮತಕ್ಷೇತ್ರದ ಶಿವಗಿರಿ ರಸ್ತೆಯಲ್ಲಿರುವ ಮತ್ತು 17ನೇ ವಾರ್ಡ್ ವ್ಯಾಪ್ತಿಯ ಸೌಭಾಗ್ಯ ನಗರ ನಿವಾಸಿಗಳು ಈ ಬಾರಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.  ಅಲ್ಲದೇ, ಈ ಕುರಿತು ಬಡಾವಣೆಯಲ್ಲಿ ಫ್ಲೆಕ್ಸ್ ಕೂಡ ಅಳವಡಿಸಿದ್ದಾರೆ.  ಈ ಕುರಿತು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಇಲ್ಲಿನ ಮುಖಂಡರು ಶ್ರೀ ಹನುಮಾನ ಮಂದಿರ ಸೇವಾ ಸಮಿತಿ ನೇತೃತ್ವದಲ್ಲಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಮ್ಮ ಬಡಾವಣೆಯಲ್ಲಿ ಕಳೆದ ಐದು ವರ್ಷಗಳಿಂದ ರಸ್ತೆ ಮಾಡಿಲ್ಲ.  24×7 ಕುಡಿಯುವ […]