ನಾನಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿ. ಪಂ. ಸಿಇಓ ರಾಹುಲ್ ಶಿಂಧೆ

ವಿಜಯಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಮಂಳವಾರ ದೇವರಹಿಪ್ಪರಗಿ ಹಾಗೂ ಸಿಂದಗಿ ತಾಲೂಕಿನ ಗ್ರಾಮ ಪಂಚಾಯತ್‍ಗಳಿಗೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಮತಗಟ್ಟೆಗೆ ಭೇಟಿ ನೀಡಿ, ಮತಗಟ್ಟೆಯಲ್ಲಿ ಕಲ್ಪಿಸಲಾದ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಬೈರವಾಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳ ಹಾಗೂ ಕೊಕಟನೂರ ಸರಕಾರಿ ಹಳ್ಳದಲ್ಲಿ ಹೂಳು ತೆಗೆಯುವ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ, ಕಾಮಗಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಕಾರ್ಮಿಕರನ್ನು ಭೇಟಿ ಮಾಡಿ, […]

ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಮತದಾನ ಜಾಗೃತಿ ಅಭಿಯಾನ

ವಿಜಯಪುರ: ಪ್ರತಿ ಪ್ರಜೆಯು ಮತದಾನ ಮಾಡುವುದು ಸಂವಿಧಾನ ಕಲ್ಪಿಸಿಕೊಟ್ಟಿರುವ ಹಕ್ಕು.  ಬರುವ ಮೇ-10ರ ಮತದಾನ ದಿನದಂದು ಎಲ್ಲರೂ ಪಾಲ್ಗೊಂಡು ಮತದಾನ ಮಾಡಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಿ. ಬಿ. ಕುಂಬಾರ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಮಹಾ ನಗರಪಾಲಿಕೆ ಸಹಯೋಗದಲ್ಲಿ ಸ್ವೀಪ್ ಕಾರ್ಯಕ್ರಮದಡಿ ನಗರದ ಶಂಕರಲಿಂಗ ದೇವಸ್ಥಾನ ಜೋರಾಪುರ ಪೇಠದಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಮಹಿಳೆಯರಿಗಾಗಿ ಆಯೋಜಿಸಿದ್ದ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮತದಾನದಿಂದ ಯಾರೂ ವಂಚಿತರಾಗಬಾರದು. ಮತದಾರರು […]

ಎರಡು ದಿನಗಳಲ್ಲಿ ಮುಂದಿನ ನಿರ್ಧಾರ- ಟಿಕೆಟ್ ಸಿಗದ ಕುರಿತು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅಸಮಾಧಾನ

ವಿಜಯಪುರ: ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಅಪ್ಪು ಪಟ್ಟಣಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಎರಡು ದಿನಗಳಲ್ಲಿ ಬೆಂಬಲಿಗರು, ಕಾರ್ಯಕರ್ತರು, ಹಿತೈಷಿಗಳು, ನಾನಾ ಸಮಾಜದ ಮುಖಂಡರ ಸಭೆ ಕರೆದು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಜಯಪುರ ನಗರ ಮತಕ್ಷೇತ್ರದಿಂದ ನನಗೆ ಟಿಕೆಟ್ ಸಿಗುವ ನಿರೀಕ್ಷೆಯಿತ್ತು.  ಈಗ ಟಿಕೆಟ್ ಕೈತಪ್ಪಿಸುವುದರಿಂದ ನೋವು ಆಗಿದೆ. ಅಸಮಾಧಾನ ಕೂಡ ಆಗಿದೆ.  ಕಾರ್ಯಕರ್ತರಿಗೂ ಇದರಿಂದ ನೋವು ಮತ್ತು […]