ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಸಿಂದಗಿಯಲ್ಲಿ ನಾಮಪತ್ರ ಸಲ್ಲಿಕೆ

ವಿಜಯಪುರ: ಕಾಂಗ್ರೆಸ್ ಮುಖಂಡ ಅಶೋಕ‌ ಮನಗೂಳಿ ಸಿಂದಗಿ ಮತಕ್ಷೇತ್ರದಿಂದ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಸಿಂದಗಿ‌ ಮತಕ್ಷೇತ್ರಕ್ಕೆ ಇನ್ನೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಆದರೂ, ಗುರುವಾರ ಶುಭ ದಿನವಾಗಿರುವ ಹಿನ್ನೆಲೆಯಲ್ಲಿ ಬಿ ಫಾರಂ ಇಲ್ಲದೇ ಕಾಂಗ್ರೆಸ್ ಅಭ್ಯರ್ಥಿಯಾಗಿ‌ ನಾಮಪತ್ರ ಸಲ್ಲಿಸಿದರು.

ಚುನಾವಣಾಧಿಕಾರಿ ಶಿದ್ರಾಮ ಮಾರಿಹಾಳ ಅವರಿಗೆ ಅಶೋಕ ಮನಗೂಳಿ‌ ತಮ್ಮ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ನ್ಯಾಯವಾದಿ ಬಿ. ಜಿ. ನೆಲ್ಲಗಿ, ರಮೇಶ ಭಂಟನೂರ, ಎಂ. ಕೆ. ಸೊನ್ನದ ಹಾಗೂ ಸಹಾಯಕ ಚುನಾವಣಾಧಿಕಾರಿ ತಹಸೀಲ್ದಾರ ನಿಂಗಣ್ಣ ಬಿರಾದಾರ, ಸುರೇಶ ಚವಲರ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌