ಶಾಸಕ‌ ರಮೇಶ ಭೂಸನೂರ ಸಿಂದಗಿಯಿಂದ ಮರು ಆಯ್ಕೆ ಬಯಸಿ ನಾಮಪತ್ರ ಸಲ್ಲಿಕೆ

ವಿಜಯಪುರ: ವಿಧಾನ ಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದಂತೆ ಶಾಸಕ ರಮೇಶ ಭೂಸನೂರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಈಗಾಗಲೇ ರಮೇಶ ಭೂಸನೂರ ಅವರಿಗೆ ಟಿಕೆಟ್ ನೀಡಿದ್ದು, ತಹಸೀಲ್ದಾರ ಕಚೇರಿಗೆ ತೆರಳಿ ಚುನಾವಣಾಧಿಕಾರಿ‌ ಸಿದ್ರಾಮ ಮಾರಿಹಾಳ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ನ್ಯಾಯವಾದಿ ಅರವಿಂದ ಕನ್ನೂರ, ಮಲ್ಲಣ್ಣ ಸಾಲಿ, ಸಿದ್ಧರಾಮ ಪಾಟೀಲ ಹೂವಿನಹಳ್ಳಿ, ಪೀರು ಕೆರೂರ, ಮಂಡಲ ಅಧ್ಯಕ್ಷ ಈರಣ್ಣ ರಾವೂರ ಉಪಸ್ಥಿತರಿದ್ದರು.
ಸಹಾಯಕ ಚುನಾವಣಾಧಿಕಾರಿ ನಿಂಗಣ್ಣ ಬಿರಾದಾರ, ಸುರೇಶ ಚವಲರ ಅವರೂ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌