ವಿಜಯಪುರ ನಗರ ಬಿಜೆಪಿ ಅಭ್ಯರ್ಥಿಯಾಗಿ ಯತ್ನಾಳ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ

ವಿಜಯಪುರ: ವಿಧಾನ ಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಚುರುಕು ಪಡೆದಿದ್ದು, ವಿಜಯಪುರ ನಗರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಸನಗೌಡ ಪಾಟೀಲ ಯತ್ನಾಳ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.

ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಅಧಿಕಾರಿ ಕ್ಯಾ. ಮಹೇಶ ಮಾಲಿಗಿತ್ತಿ ಅವರಿಗೆ ಯತ್ನಾಳ ತಮ್ಮ ನಾಮಪತ್ರ ಸಲ್ಲಿಸಿದರು.

ನಾಳೆ ರವಿವಾರ ಪಂಚಕ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಕಾರ್ಪೋರೇಟರ್ ಎಂ. ಎಸ್. ಕರಡಿ, ಕ್ಯಾಂಡಿಡೇಟ್ ಏಜೆಂಟ್ ಗುರು ಗಚ್ಚಿನಮಠ, ನ್ಯಾಯವಾದಿ ಸತೀಶಚಂದ್ರ ಕುಲಕರ್ಣಿ, ಎನ್. ಎಂ. ಪ್ಯಾಟಿ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಬಸನಗೌಡ ಪಾಟೀಲ ಯತ್ನಾಳ, ಏ. 18 ರಂದು ಮತ್ತೋಮ್ಮೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.

Leave a Reply

ಹೊಸ ಪೋಸ್ಟ್‌