ಸ್ವಚ್ಛ ಆಡಳಿತ ನೀಡಲು ಹಲವರಿಗೆ ಟಿಕೆಟ್ ನಿರಾಕರಿಸಲಾಗಿದೆ- ಬಿಜೆಪಿಗೆ ಅಧಿಕಾರ ತಪ್ಪಿಸಲು ವಿದೇಶಿ ಶಕ್ತಿಗಳು ಕೈ ಜೋಡಿಸಿವೆ- ಯತ್ನಾಳ

ವಿಜಯಪುರ: ಸ್ವಚ್ಛ ಆಡಳಿತ ನೀಡಲು ಹಲವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಯಲು ವಿದೇಶಿ ಶಕ್ತಿಗಳ ಷಡ್ಯಂತ್ರ ರೂಪಿಸಿವೆ ಎಂದು ವಿಜಯಪುರ ನಗರ ಬಿಜೆಪಿ ಅಭರ್ಥಿ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿರುವ ಈ ಎಲ್ಲ ವೇಸ್ಟ್ ಬಾಡಿಗಳನ್ನು ಅಂದರೆ ಕಸವನ್ನು ತೆಗೆದು ಕರ್ನಾಟಕದಲ್ಲಿ ಸ್ವಚ್ಛ ಆಡಳಿತ ನೀಡಲು ಹಲವಾರು ಜನರಿಗೆ ಟಿಕೆಟ್ ನಿರಾಕರಿಸಲಾಗಿದೆ.  ಇವರೆಲ್ಲರ ಬಗ್ಗೆ ಪ್ರಧಾನಿ, ಬಿಜೆಪಿ ಮುಖಂಡರಿಗೆ ಮಾಹಿತಿ ಇದೆ.  ಎರಡನೇ ಹಂತದ ನಾಯಕರನ್ನು ಬೆಳೆಸಬೇಕು.  […]

ವಿಧಾನಸಭೆ ಚುನಾವಣೆ: ಮತಗಟ್ಟೆಗಳಲ್ಲಿ ಕಾರ್ಯನಿರತ ಸಿಬ್ಬಂದಿಗಳಿಗೆ ಊಟ, ಉಪಹಾರ ಸೂಕ್ತ ವ್ಯವಸ್ಥೆಗೆ ಸೂಚನೆ

ವಿಜಯಪುರ: ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮತದಾನದ ಪೂರ್ವದಿನ ಹಾಗೂ ಮತದಾನ ದಿನ ಊಟ ಹಾಗೂ ಉಪಹಾರ ಪೂರೈಸಲು ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ ನೀಡಿದ್ದಾರೆ.    ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ 2072 ಮತಗಟ್ಟೆಗಳಲ್ಲಿ ನಿಯೋಜಿತ ಸಿಬ್ಬಂದಿಗಳಿಗೆ ನಿಗದಿತ ಸಮಯದಲ್ಲಿ ಊಟ, ಉಪಹಾರ, ಶುದ್ಧ ಕುಡಿಯುವ ನೀರು ಒದಗಿಸಬೇಕು.  ಮತಗಟ್ಟೆಗಳಲ್ಲಿ ಹಾಗೂ ಮತಗಟ್ಟೆಗೆ […]