ಬಿಜೆಪಿ ಬಿಡಲ್ಲ- ಯತ್ನಾಳ ಪರ ಪ್ರಚಾರ ಮಾಡಲ್ಲ- ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಸ್ಪಷ್ಟನೆ

ವಿಜಯಪುರ: ಬಾರತೀಯ ಜನತಾ ಪಕ್ಷದಲ್ಲಿಯೇ ಉಳಿದುಕೊಂಡು ಕೆಲಸ ಮಾಡುತ್ತೇನೆ.  ಆದರೆ, ವಿಜಯಪುರ ನಗರ ಮತಕ್ಷೇತ್ರದಲ್ಲಿ ಮಾತ್ರ ಯಾರು ಹೇಳಿದರೂ ಪ್ರಚಾರ ಮಾಡುವುದಿಲ್ಲ ಎಂದು ಮಾಜಿ ಸಚಿವ ಮತ್ತು ಬಿಜೆಪಿ ಟಿಕೆಟ್ ವಂಚಿತ ಅಪ್ಪು ಪಟ್ಟಣಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ಸಿಗದಿದ್ದರೆ ಪಕ್ಷ ಬಿಟ್ಟು ಹೋಗುತ್ತೀರಾ? ಬೇರೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಎಲ್ಲರೂ ಕೇಳುತ್ತಿದ್ದರು.  ಆಗ ನಾನು ಬೆಂಬಲಿಗರು ಮತ್ತು ಹಿತೈಷಿಗಳೊಂದಿಗೆ ಮಾತನಾಡಿ ತಿಳಿಸುವುದಾಗಿ ಹೇಳಿದ್ದೆ.  ಈಗ ಕಳೆದ ಎರಡು ದಿನಗಳಿಂದ ಪಕ್ಷದ ಚಟುವಟಿಕೆಯಲ್ಲಿ […]

ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ ಚುನಾವಣೆ ಪ್ರಚಾರಕ್ಕೆ ಚಾಲನೆ

ವಿಜಯಪುರ: ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಎಚ್.ಟಿ ಅವರು ನಗರದಲ್ಲಿರುವ ಹುತಾತ್ಮಹ ವೃತ್ತಕ್ಕೆ ತೆರಳಿ ಸ್ವಾತಂತ್ರ್ಯ ಹೋರಾಟಗಾರರ ಹುತಾತ್ಮ ಸ್ಥಂಭಕ್ಕೆ ಮಾಲಾರ್ಪಣೆ ಮಾಡಿ ತಮ್ಮ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರು ಬಡತನ ನಿರುದ್ಯೋಗ, ಜಾತಿಪದ್ದತಿ, ಭ್ರಷ್ಟಾಚಾರ ಮುಂತಾದ ಸಮಸ್ಯೆಗಳಿಂದ ಮುಕ್ತವಾದ ಸ್ವಾತಂತ್ರ್ಯ ಬಯಸಿದ್ದರು.  ಆದರೆ, ಸ್ವಾತಂತ್ರ್ಯ ಬಂದ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಬಿಜೆಪಿ ಹಾಗೂ ಎಲ್ಲ ಪ್ರಾದೇಶಿಕ ಪಕ್ಷಗಳು ಈ ಸಮಸ್ಯೆಗಳನ್ನು ಬಗೆಹರಿಸಲಿಲ್ಲ ಎಂದು ಆರೋಪಿಸಿದರು. […]