ಜಾತಿ ನೋಡಿ ಮತ ಹಾಕಬಾರದು- ಅಭಿವೃದ್ಧಿ ನೋಡಿ ವೋಟ್ ಹಾಕಬೇಕು- ಕಾಂತಾ ನಾಯಕ

ವಿಜಯಪುರ: ಮತ ಹಾಕುವಾಗ ಜಾತಿ ನೋಡಬಾರದು. ಅಭಿವೃದ್ಧಿ ಮಾಡುವ ಅಭ್ಯರ್ಥಿಯನ್ನು ನೋಡಿ ವೋಟ್ ಹಾಕಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ ಹೇಳಿದರು. ನಾಗಠಾಣ ಮತಕ್ಷೇತ್ರದ ಕನ್ನೂರ ಗ್ರಾಮದಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಕಾಂಗ್ರೆಸ್ ಅಭ್ಯರ್ಥಿ ವಿಠ್ಠಲ ಧೋಂಡಿಬಾ ಕಟಕದೊಂಡ ಪರ ಕೈಗೊಂಡ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಭ್ರಷ್ಟಾಚಾರದಲ್ಲಿ ಮತ್ತು ಜೆಡಿಎಸ್ ಜಾತಿ ರಾಜಕಾರಣದಲ್ಲಿ ನಿರತವಾಗಿವೆ. ಜನಪ್ರತಿನಿಧಿಗಳು ಕೇವಲ ಶುಭ ಮತ್ತು ಅಶುಭ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರೆ […]

ಏ.30ರಂದು ನಡೆಯುವ ನಮ್ಮ ನಡೆ ಮತಗಟ್ಟೆಯ ಕಡೆ ಮತದಾನ ಜಾಗೃತಿ ಕಾರ್ಯಕ್ರಮ- ಯಶಸ್ವಿಗೊಳಿಸಲು ಡಿಸಿ ಡಾ. ದಾನಮ್ಮನವರ ಕರೆ

ವಿಜಯಪುರ: ಏಪ್ರಿಲ್ 30 ರಂದು ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಜರುಗುವ “ನಮ್ಮ ನಡೆ, ಮತಗಟ್ಟೆಯ ಕಡೆ” ಕಾರ್ಯಕ್ರಮದಲ್ಲಿ ಎಲ್ಲರೂ ಅತ್ಯುತ್ಸಾಹದಿಂದ ಭಾಗವಹಿಸಿ, ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸುವುದರ ಜೊತೆಗೆ ಮತದಾರರಲ್ಲಿ ಮತದಾನ ಅರಿವು ಮೂಡಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ಕರೆ ನೀಡಿದರು. ಶುಕ್ರವಾರ  ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ  “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಈಗಾಗಲೇ ಮುಖ್ಯ ಚುನಾವಣಾಧಿಕಾರಿಗಳು ಈ ಕಾರ್ಯಕ್ರಮ ರೂಪರೇಷಗಳ […]

ಅಳುವುದರಿಂದ ಮತಗಳು ಬರುತ್ತಿದ್ದರೆ ಬಹಳ ಜನ ಮುಖ್ಯಮಂತ್ರಿಯಾಗುತ್ತಿದ್ದರು- ವಿಪ ಮಾಜಿ ಸದಸ್ಯ ಜಿ. ಕೆ. ಪಾಟೀಲ

ವಿಜಯಪುರ: ಅಳುವುದರಿಂದ ಮತಗಳು ಬರುವಂತಿದ್ದರೆ ಬಹಳ ಜನ ಮುಖ್ಯಮಂತ್ರಿಯಾಗುತ್ತಿದ್ದರು ಎಂದು ವಿಧಾನ ಪರಿಷತ ಮಾಜಿ ಸದಸ್ಯ ಜಿ. ಕೆ. ಪಾಟೀಲ ಹೇಳಿದ್ದಾರೆ. ತಿಕೋಟಾ ಪಟ್ಟಣದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಕೈಗೊಂಡ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಚುನಾವಣೆಗಳು ಬರುತ್ತವೆ, ಹೋಗುತ್ತವೆ. ಈ ಸಂದರ್ಭಲ್ಲಿ ಮತಯಾಚಿಸುವ ಕೆಲವರು ಅಳುತ್ತಾರೆ.  ಅಡ್ಡ ಬೀಳುತ್ತಾರೆ.  ಅಂಗಲಾಚುತ್ತಾರೆ.  ಈ ಮೂಲಕ ಅನುಕಂಪ ಗಿಟ್ಟಿಸಲು ಪ್ರಯತ್ನಿಸುತ್ತಾರೆ.  ಆದರೆ, ಇದು ಅರ್ಹತೆಯಾಗಬಾರದು. ಅಳುವುದರಿಂದ ಮತಗಳು ಬರುವಂತಿದ್ದರೆ ಬಹಳ ಜನ […]

ನಾಗಠಾಣ(ಮೀ) ಬಿಜೆಪಿ ಅಭ್ಯರ್ಥಿ ಸಂಜೀವ ಐಹೊಳೆ ಪರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಬಿರುಸಿನ ಪ್ರಚಾರ

ವಿಜಯಪುರ: ನಾಗಠಾಣ(ಮೀ) ಬಿಜೆಪಿ ಅಭ್ಯರ್ಥಿ ಸಂಜೀವ ಐಹೊಳೆ ಪರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಬಿರುಸಿನ ಪ್ರಚಾರ ನಡೆಸಿದರು.  ವಿಜಯಪುರ ತಾಲೂಕಿನ ಖತಿಜಾಪೂರ, ಜುಮನಾಳ, ಹಿಟ್ನಳ್ಳಿ, ಉತ್ನಾಳ, ಗ್ರಾಮಗಳಲ್ಲಿ ಅವರು ಮತಚಾನೆ ಮಾಡಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಷ್ಠೆಯಿಂದ ಪಕ್ಷವನ್ನು ಸಂಘಟಿಸಿದ ಸಾಮಾನ್ಯ ಕಾರ್ಯಕರ್ತನಿಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ.  ಜನಪರ ನಿಲುವಿನ ಸಂಜೀವ ಐಹೊಳಿ‌ ಜನಸ್ಪಂದನೆಯ ಮನೋಭಾವವುಳ್ಳ ವ್ಯಕ್ತಿ, ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಅವರಿಗೆ ಅರಿವಿದೆ.  ‌ಜನತೆ ಅವರಿಗೆ ಮತ ಹಾಕುವ ಮೂಲಕ […]

ಎಂ. ಬಿ. ಪಾಟೀಲ ಅಭಿಮಾನಿಯಿಂದ ವಿಜಯಪುರದಿಂದ ತಿಕೋಟಾ ಹಾಜಿ ಮಸ್ತಾನ್ ದರ್ಗಾವರೆಗೆ ಮೈಮೇಲೆ ಚಿತ್ರ ಬಿಡಿಸಿಕೊಂಡು ಪಾದಯಾತ್ರೆ

ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲರು ಚುನಾವಣೆಯಲ್ಲಿ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಲಿ ಎಂದು ಪ್ರಾರ್ಥಿಸಿ ಯುವಕನೋರ್ವ ವಿಜಯಪುರದಿಂದ ತಿಕೋಟಾ ಹಾಜಿಮಸ್ತಾನ ದರ್ಗಾವರೆಗೆ ಪಾದಯಾತ್ರೆ ಕೈಗೊಂಡು ಗಮನ ಸೆಳೆದಿದ್ದಾನೆ. ವಿಜಯಪುರ ನಗರದ ಸಕಾಫ್ ರೋಜಾ ನಿವಾಸಿ ಸಮೀರ ಜಾಗೀರದಾರ(36) ಗ್ಯಾರೇಜ್ ನಡೆಸುತ್ತಿದ್ದಾರೆ. ಎಂ. ಬಿ. ಪಾಟೀಲ ಅವರ ಕಟ್ಟಾ ಅಭಿಮಾನಿಯಾಗಿರುವ ಅವರು ವಿಜಯಪುರ ನಗರದ ಜೋಡ ಗುಮ್ಮಟದಿಂದ ತಿಕೋಟಾ ಹಾಜಿಮಸ್ತಾನ ದರ್ಗಾವರೆಗೆ ಪಾದಯಾತ್ರೆ ನಡೆಸಿದ್ದಾರೆ. ಈ ವಿಷಯ ತಿಳಿದು ದರ್ಗಾಕ್ಕೆ […]