ಹಂಚನಾಳದಲ್ಲಿ ಮನೆಮನೆಗೆ ತೆರಳಿ ಎಂ. ಬಿ. ಪಾಟೀಲ ಪರ ಮತಯಾಚನೆ ಮಾಡಿದ ಎಂಎಲ್ಸಿ ಸುನೀಲಗೌಡ ಪಾಟೀಲ

ವಿಜಯಪುರ: ಎಂ. ಬಿ. ಪಾಟೀಲರು ಶ್ರಮಿಕ ವರ್ಗದ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ಬಬಲೇಶ್ವರ ಮತಕ್ಷೇತ್ರದ ಹಂಚನಾಳ ಎಲ್.ಟಿ.-1, ಎಲ್.ಟಿ.-2, ಎಲ್.ಟಿ.-3, ಹಂಚನಾಳ ಪಿ.ಎಚ್. ಗ್ರಾಮ, ಬರಟಗಿ ಎಲ್.ಟಿ.-3 ಮತ್ತು ಎಲ್.ಟಿ.-3 ಬಿ ಗಳಲ್ಲಿ ಮನೆ ಮನೆಗೆ ತೆರಳಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲರ ಪರ ಮತಯಾಚಿಸಿ ಅವರು ಮಾತನಾಡಿದರು. ಜಲಸಂಪನ್ಮೂಲ ಸಚಿವರಾಗಿ ಮತ್ತು ಶಾಸಕರಾಗಿ ಎಂ. ಬಿ. ಪಾಟೀಲರು ನೀರಾವರಿ […]

ಗುಮ್ಮಟ ನಗರಿಯಲ್ಲಿ ಬಣಜಿಗ ಸಮುದಾಯದ ಸಭೆ: ಯತ್ನಾಳಗೆ ಬೆಂಬಲ

ವಿಜಯಪುರ: ಬಣಜಿಗ ಸಮುದಾಯ ವಿಜಯಪುರ ನಗರದ ಅಭಿವೃದ್ಧಿ ಮತ್ತು ಸುರಕ್ಷತೆಗಾಗಿ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬೆಂಬಲಿಸಲು ಸಭೆಯಲ್ಲಿ ನಿರ್ಧರಿಸಿದೆ. ನಗರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ನಾನಾ ಮುಖಂಡರು, ಯತ್ನಾಳ ಅವರ ಗೆಲುವಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಒಮ್ಮತದ ನಿರ್ಣಯ ಕೈಗೊಂಡಿದೆ.  ಗೊಂದಲ ಸೃಷ್ಟಿಸಲು ಕೆಲವರು ತಪ್ಪು ಸಂದೇಶ ನೀಡಿ, ಪಂಚಮಸಾಲಿ ಹಾಗೂ ಬಣಜಿಗ ಸಮುದಾಯಗಳ ಮಧ್ಯೆ ಇದ್ದ ಅನ್ಯೋನ್ಯತೆ ಕೆಡಿಸಲು ಯತ್ನಿಸಿದ್ದರು.  ಇದರಿಂದ ಆಗುತ್ತಿದ್ದ ಸಮಸ್ಯೆ ತಪ್ಪಿಸಲು ಸಭೆ ನಡೆಸುವ ಮೂಲಕ ಸಮಾಜಕ್ಕೆ ಸಂದೇಶ […]