ವಿಧಾನಸಭೆ ಚುನಾವಣೆ ಕಡ್ಡಾಯವಾಗಿ ಮತದಾನ ಮಾಡಲು ಕಾರ್ಯ ನಿರ್ವಾಹಣಾಧಿಕಾರಿ ಬಸವರಾಜ ಐನಾಪುರ ಕರೆ

ವಿಜಯಪುರ: ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ಅರ್ಹ ಮತದಾರರು ಮೇ 10 ರಂದು ನಡೆಯುವ ಮತದಾನದಲ್ಲಿ ಕಡ್ಡಾಯವಾಗಿ ಮತ ಚಲಾಯಿಸುವಂತೆ ತಿಕೋಟಾ ತಾ. ಪಂ. ಕಾರ್ಯ ನಿರ್ವಾಹಣಾಧಿಕಾರಿ ಬಸವರಾಜ ಐನಾಪುರ ಅವರು ಕರೆ ನೀಡಿದರು. ತಿಕೋಟಾ ತಾ. ಪಂ. ಹಾಗೂ ತಾಲೂಕಾ ಸ್ವೀಪ್ ಸಮಿತಿ ವತಿಯಿಂದ ತಿಕೋಟಾ ನಗರದಲ್ಲಿ ಮತದಾನ ಜಾಗೃತಿಗಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮತದಾರರು ಯಾವುದೇ ಒತ್ತಡ, ಆಸೆ- ಆಮಿಷಗಳಿಗೆ ಒಳಗಾಗದೆ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕು. ಮತದಾನದ ದಿನದಂದು ಎಲ್ಲ […]