ದಿ ಕೇರಳ ಸ್ಟೋರಿ ಚಲನಚಿತ್ರ ಉಚಿತ ವೀಕ್ಷಣೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ವ್ಯವಸ್ಥೆ- ಶಾಸಕರ ಪುತ್ರ ರಾಮನಗೌಡ ಪಾಟೀಲ ಯತ್ನಾಳರಿಂದ ಚಾಲನೆ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು, ದೇಶಾದ್ಯಂತ ಸಂಚಲನ ಮೂಡಿಸಿರುವ ‘ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ಹಿಂದೂಗಳು ಒಟ್ಟಾಗಿ ಕುಳಿತುಕೊಂಡು ವೀಕ್ಷಣೆ ಮಾಡಲು ನಗರದ ಅಪ್ಸರಾ ಚಿತ್ರಮಂದಿರದಲ್ಲಿ ಮೂರು ದಿನಗಳ ಕಾಲ ಉಚಿತ ವ್ಯವಸ್ಥೆ ಕಲ್ಪಿಸಿದ್ದು, ಪ್ರಥಮ ಶೋ ಪ್ರದರ್ಶನಕ್ಕೆ ಯತ್ನಾಳ ಪುತ್ರ ರಾಮನಗೌಡ ಪಾಟೀಲ ಯತ್ನಾಳ ಚಾಲನೆ ನೀಡಿ, ಚಿತ್ರ ವೀಕ್ಷಿಸಿದರು.  ಈ ಉಚಿತ ಸಿನೇಮಾ ವೀಕ್ಷಣೆಗೆ ಉತ್ಸಾಹದಿಂದ ಆಗಮಿಸಿದ ಜನರು ಸಂಪೂರ್ಣ ಚಿತ್ರ ವೀಕ್ಷಿಸಿದರು.  ಚಿತ್ರಮಂದಿರದಲ್ಲಿ ಇರುವ […]

ವಾಟ್ಸಾಪ್ ನಲ್ಲಿ ಪಾಕಿಸ್ತಾನದ ಪರ ಮೆಸೇಜ್ ಬರೆದು ಕೃಷ್ಣನ ಜನ್ಮಸ್ಥಾನ ಸೇರಿದ ನಾಲತವಾಡದ ಯುವಕ ವೀರೇಶ

ವಿಜಯಪುರ: ಯುವಕನೊಬ್ಬ ವಾಟ್ಸಾಪ್ ನಲ್ಲಿ ಪಾಕಿಸ್ತಾನದ ಪರ ಬರಹ ಬರೆದು ಕೃಷ್ಣನ ಜನ್ಮಸ್ಥಾನ ಸೇರಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದಲ್ಲಿ ನಡೆದಿದೆ. ನಾಲತವಾಡ ಪಟ್ಟಣದ ಕಾನಬಾವಿ ಓಣಿಯ ನಿವಾಸಿ ವೀರೇಶ ಪರಯ್ಯ ಕರ್ಪೂರಮಠ(31) ಎಂಬಾತ ಈ ಕೃತ್ಯ ಎಸಗಿದ್ದು, ಈತನನ್ನು ಬಂಧಿಸಿರುವ ಮುದ್ದೇಬಿಹಾಳ ಪೊಲೀಸರು ನ್ಯಾಯಾಧೀಶರ ಎದುರು ಹಾಜರು ಪಡಿಸಿ ಕೋರ್ಟಿನ ಆದೇಶದಂತೆ ವಿಜಯಪುರ ನಗರದ ದರ್ಗಾದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮುದ್ದೇಬಿಹಾಳ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವ ಅಪ್ಪಾಜಿ ನಾಡಗೌಡ ಹೆಸರಿನ […]