ದಿ ಕೇರಳ ಸ್ಟೋರಿ ಚಲನಚಿತ್ರ ಉಚಿತ ವೀಕ್ಷಣೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ವ್ಯವಸ್ಥೆ- ಶಾಸಕರ ಪುತ್ರ ರಾಮನಗೌಡ ಪಾಟೀಲ ಯತ್ನಾಳರಿಂದ ಚಾಲನೆ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು, ದೇಶಾದ್ಯಂತ ಸಂಚಲನ ಮೂಡಿಸಿರುವ ‘ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ಹಿಂದೂಗಳು ಒಟ್ಟಾಗಿ ಕುಳಿತುಕೊಂಡು ವೀಕ್ಷಣೆ ಮಾಡಲು ನಗರದ ಅಪ್ಸರಾ ಚಿತ್ರಮಂದಿರದಲ್ಲಿ ಮೂರು ದಿನಗಳ ಕಾಲ ಉಚಿತ ವ್ಯವಸ್ಥೆ ಕಲ್ಪಿಸಿದ್ದು, ಪ್ರಥಮ ಶೋ ಪ್ರದರ್ಶನಕ್ಕೆ ಯತ್ನಾಳ ಪುತ್ರ ರಾಮನಗೌಡ ಪಾಟೀಲ ಯತ್ನಾಳ ಚಾಲನೆ ನೀಡಿ, ಚಿತ್ರ ವೀಕ್ಷಿಸಿದರು. 

ಈ ಉಚಿತ ಸಿನೇಮಾ ವೀಕ್ಷಣೆಗೆ ಉತ್ಸಾಹದಿಂದ ಆಗಮಿಸಿದ ಜನರು ಸಂಪೂರ್ಣ ಚಿತ್ರ ವೀಕ್ಷಿಸಿದರು.  ಚಿತ್ರಮಂದಿರದಲ್ಲಿ ಇರುವ ಕುರ್ಚಿಗಳು ತುಂಬಿದ  ಮೇಲೆ ಬಂದ ಜನರು ಮರಳಿ ಹೋಗದೆ, ನೆಲದ ಮೇಲೆ ಕುಳಿತು ವೀಕ್ಷಿಸಿರುವುದು ಗಮನಾರ್ಹವಾಗಿತ್ತು.

ವಿಜಯಪುರ ನಗರದಲ್ಲಿ ದಿ ಕೇರಳ ಫೈಲ್ಸ್ ಚಿತ್ರ ವೀಕ್ಷಿಸಿದ ಶಾಸಕ ಯತ್ನಾಳ ಪುತ್ರ ರಾಮನಗೌಡ ಬ. ಪಾಟೀಲ ಯತ್ನಾಳ

ಯುವ ಸಮೂಹಕ್ಕೆ ದಿ ಕೇರಳ ಸ್ಟೋರಿ ಚಿತ್ರ ವೀಕ್ಷಣೆ ಅಗತ್ಯವಿದೆ.  ಇದನ್ನು ನೋಡುವುದರಿಂದ ವಾಸ್ತವ ತಿಳಿಯುವುದಲ್ಲದೆ, ನಮ್ಮಿಂದ ಭವಿಷ್ಯದಲ್ಲಿ ನಡೆಯಬಹುದಾದ ತಪ್ಪುಗಳನ್ನು ತಡೆಯಲು ಜಾಗೃತರಾಗಲು ನೆರವಾಗಲಿದೆ.  ಹೀಗಾಗಿ ಎಲ್ಲ ಹಿಂದೂ ಸಹೋದರ, ಸಹೋದರಿಯರು ಕುಟುಂಬ ಸಮೇತ ತೆರಳಿ ವೀಕ್ಷಿಸಲು ಉಚಿತ ವ್ಯವಸ್ಥೆ ಕಲ್ಪಿಸಲಾಗಿದೆ.  ಪ್ರತಿಯೊಬ್ಬರೂ ವೀಕ್ಷಣೆ ಮಾಡಿ ಎಂದು ಶಾಸಕರ ಪುತ್ರ ರಾಮನಗೌಡ ಪಾಟೀಲ ಹೇಳಿದರು.

ಈ  ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಕಿರಣ ಪಾಟೀಲ, ಸ್ವಾಮಿ ವಿವೇಕಾನಂದ ಸೇನೆಯ ಅಧ್ಯಕ್ಷ ರಾಘವ ಅಣ್ಣಿಗೇರಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌