ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ಮೇ 20ರಿಂದ 22ರ ವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ- ವ್ಯವಸ್ಥಿತ, ಸುಗಮ ಪರೀಕ್ಷೆಗೆ ಡಿಸಿ ಡಾ. ದಾನಮ್ಮನವರ ಸೂಚನೆ

ವಿಜಯಪುರ: ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಇದೇ ಮೇ 20 ರಿಂದ ಮೇ.22 ರವರೆಗೆ ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಅತ್ಯಂತ ಸುವ್ಯವಸ್ಥಿತವಾಗಿ ಹಾಗೂ ಸುಸೂತ್ರವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.  
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದ ಅವರು,  ಮೇ.20ರ ಶನಿವಾರದಂದು ಜೀವಶಾಸ್ತ್ರ, ಗಣಿತ, ಮೇ 21 ರಂದು ಭೌತಶಾಸ್ತ್ರ ಹಾಗೂ ರಸಾಯನ ಶಾಸ್ತ್ರ ಮತ್ತು ಮೇ.22 ರಂದು ಕನ್ನಡ ವಿಷಯ ಕುರಿತು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ನೋಂದಣಿಯಾದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರರಿಗೆ ಪರೀಕ್ಷಾ ಕೊಠಡಿಗಳಿಗೆ ಪ್ರವೇಶ ಇರುವುದಿಲ್ಲ. ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಬೇಕು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಲೋಪ ಆಗಬಾರದು. ನಿಯಮದಂತೆ ಮಾರ್ಗಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಬೇಕು. ಅದರಂತೆ,ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್‍ಗಳು, ವೀಕ್ಷಕರು, ಜಾಗ್ರತ ದಳದ ಸದಸ್ಯರು ಅವಶ್ಯಕ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದ ಅವರು, ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ,ಯಾವುದೇ ರೀತಿಯ ಲೋಪವಾಗದಂತೆ ಪರೀಕ್ಷೆ ನಡೆಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, 10,510 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ವಿಜಯಪುರ ನಗರದಲ್ಲಿ 19, ಬಬಲೇಶ್ವರ-1, ತಿಕೋಟ-2,ಬಸವನ ಬಾಗೇವಾಡಿಯಲ್ಲಿ-2 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.  ಪ್ರತಿ ಕೊಠಡಿಯಲ್ಲಿ ಕನಿಷ್ಠ ಮೂರು ಅಡಿ ದೈಹಿಕ ಅಂತರವಿರಬೇಕು. ಗರಿಷ್ಠ 24 ವಿದ್ಯಾರ್ಥಿಗಳು ಇರಬೇಕು.  ಒಂದು ಬೆಂಚ್‍ನಲ್ಲಿ  ಇಬ್ಬರು ವಿದ್ಯಾರ್ಥಿಗಳು ಮಾತ್ರ ಇದ್ದು, ಒಟ್ಟು 12 ಬೆಂಚ್‍ಗಳನ್ನು ಅಳವಡಿಸಬೇಕು. ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ನಿರ್ವಹಣೆ ಅತ್ಯಂತ ವ್ಯವಸ್ಥಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ವಿಜಯಪುರ ಜಿಲ್ಲಾಧಿಕಾರಿ ಡಾ. ದಾನಮ್ಮನವರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು
ಪರೀಕ್ಷಾರ್ಥಿಗಳು ಯಾವುದೇ ರೀತಿಯ ಕೈ ಗಡಿಯಾರ, ಸೈಂಟಿಫಿಕ್ ಕ್ಯಾಲಕುಲೇಟರ್, ಪೇಜರ್, ಮೊಬೈಲ್ ಹಾಗೂ ಇನ್ನಿತರೆ ಎಲೆಕ್ಟ್ರಾನಿಕ್ ಪರಿಕರಗಳನ್ನು ಬಳಸದಂತೆ ಕ್ರಮಕೈಗೊಳ್ಳಬೇಕು. ಅಲ್ಲದೇ ಉಪ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಇನ್ನುಳಿದ ಪರೀಕ್ಷಾ ಸಿಬ್ಬಂದಿಗಳು ಸಹ ಮೊಬೈಲ್ ಬಳಸುವುದನ್ನು ನಿμÉೀಧಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಾಲೇಜಿನ ಪ್ರಾಚಾರ್ಯರು ಉಪಮುಖ್ಯ ಅಧೀಕ್ಷಕರಾಗಿರುತ್ತಾರೆ. ವೀಕ್ಷಕರನ್ನಾಗಿ 24 ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನಾಗಿ ನೇಮಿಸಿದ ಅಧಿಕಾರಿಗಳು ತಮಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯದಲ್ಲಿ ಹಾಜರಾಗಿ ಪರೀಕ್ಷಾ ಕಾರ್ಯ ಮುಗಿಯುವವರೆಗೂ ಕೇಂದ್ರದಲ್ಲಿದ್ದು, ಪರೀಕ್ಷೆ ಬಗ್ಗೆ ಸಂಕ್ಷಿಪ್ತವಾಗಿ ವರದಿ ನೀಡಬೇಕು.ಪರೀಕ್ಷಾ ಕೇಂದ್ರಗಳಿಗೆ ಇಬ್ಬರು ಉಪನ್ಯಾಸಕರುಗಳನ್ನು ವಿಶೇಷ ಜಾಗೃತ ದಳದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಖಜಾನೆ ಇಲಾಖೆ ಉಪನಿರ್ದೇಶಕ ರಾಜಗೋಪಾಲ, ಡಿಡಿಪಿಯು ಡಾ. ಸಿ. ಕೆ. ಹೊಸಮನಿ, ಪ್ರಶ್ನೆ ಪತ್ರಿಕೆ ವಿತರಣೆ ತಂಡದ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಹಾಗೂ ಎಲ್ಲಾ ಪರೀಕ್ಷಾ ಕೇಂದ್ರದ ಉಪಅಧೀಕ್ಷಕರು ಹಾಗೂ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಪರೀಕ್ಷಾ ವೇಳಾಪಟ್ಟಿ
ಮೇ  20 ರಂದು ಶನಿವಾರ ಬೆಳಿಗ್ಗೆ 10.30 ರಿಂದ 11.50 ರವರೆಗೆ ಜೀವಶಾಸ್ತ್ರ  ಮಧ್ಯಾಹ್ನ 2. 30 ರಿಂದ 3.50ರ ವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ.  ಮೇ 22 ರಂದು ರವಿವಾರ ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರ ವರೆಗೆ ರಸಾಯನಶಾಸ್ತ್ರ ಹಾಗೂ ಮೇ 22 ರಂದು ಸೋಮವಾರ ಬೆಳಿಗ್ಗೆ 11.30 ರಿಂದ 12.30ರ ವರೆಗೆ ಕನ್ನಡ ವಿಷಯದ ಕುರಿತು ಪರೀಕ್ಷೆ ನಡೆಯಲಿವೆ.

Leave a Reply

ಹೊಸ ಪೋಸ್ಟ್‌