ಖೊಟ್ಟಿ ಮತದಾರರ ಹೆಸರು ಸೇರ್ಪಡೆ ಕುರಿತು ನ್ಯಾಯಾಂಗ ತನಿಖೆ ನಡೆಸು ಆಗ್ರಹ- ಅಬ್ದುಲ್ ಹಮೀದ್ ಮುಶ್ರಿಫ್ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಬಿಜಾಪುರ ನಗರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಖೊಟ್ಟಿ ಹೆಸರುಗಳನ್ನು ಸೇರ್ಪಡೆಯಾಗಿದ್ದು, ಈ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರಿಫ್ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅಬ್ದುಲ್ ಹಮೀದ್ ಮುಶ್ರಿಫ್ ಮತ್ತು ಕಾಂಗ್ರೆಸ್ ಮುಖಂಡರು ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಬ್ದುಲ್ ಹಮೀದ್ ಮುಶ್ರಿಫ್, ಬಿಜಾಪುರ ನಗರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಕಲಬುರಗಿ ಜಿಲ್ಲೆಯ […]

ಶಾಸಕ ಶಿವಾನಂದ ಪಾಟೀಲರಿಗೆ ಡಿಸಿಎಂ, ವಿಜಯಾನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ನೀಡಿ- ಪಂಚಮಸಾಲಿ ಮುಖಂಡ ಶಂಕರಗೌಡ ಬಿರಾದಾರ ಆಗ್ರಹ

ವಿಜಯಪುರ: ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮತ್ತು ಲಿಂಗಾಯತ ಪಂಚಮಸಾಲಿ ಸಮುದಾಯದ ಹಿರಿಯ ಶಾಸಕ ಶಿವಾನಂದ ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಮತ್ತು ಜಲಸಂಪನ್ಮೂಲ ಖಾತೆ ನೀಡಬೇಕು ಎಂದು ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಶಿವಾನಂದ ಪಾಟೀಲರು ಅತೀ ಹೆಚ್ಚು ಮತ ಪಡೆದು ಆಯ್ಕೆಯಾಗಿದ್ದಾರೆ.  ಕಳೆದ ಮೂರು ದಶಕಗಳಿಂದ ಶಾಸಕರಾಗಿ ಮತ್ತು ಸಚಿವರಾಗಿ ಬಸವನ […]