ಉಮರಾಣಿ ಗ್ರಾಮ ಪಂಚಾಯತಿ ಕೇಂದ್ರ ಸ್ಥಾನ ಕೆರೂರ ಗ್ರಾಮಕ್ಕೆ ಸ್ಥಳಾಂತರ- ಡಿಸಿ ಡಾ. ದಾನಮ್ಮನವರ

ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೆರೂರ ಗ್ರಾಮ ಪಂಚಾಯತಿಯ ಕೇಂದ್ರ ಸ್ಥಾನವನ್ನು ಮತ್ತೆ ಕೆರೂರ ಗ್ರಾಮಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ.

ಈ ಮುಂಚೆ ಕೆರೂರಿನಲ್ಲಿದ್ದ ಕೇಂದ್ರ ಸ್ಥಾನವನ್ನು ಉಮರಾಣಿ ಗ್ರಾಮಕ್ಕೆ ಸ್ಥಳಾಂತರಿಸಿ ಸರಕಾರ ಅಧಿಸೂಚನೆ ಹೊರಡಿಸಿತ್ತು.  ಕಲಬುರ್ಗಿ ಹೈಕೋರ್ಟ್ ಪೀಠ ಅಧಿಸೂಚನೆಯನ್ನು ಮಾನ್ಯ ಮಾಡದ ಕಾರಣ ಈ ಮುಂಚೆ ಇದ್ದಂತೆ ಕೆರೂರಿಗೆ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವನ್ನು ಸ್ಥಳಾಂತರ ಮಾಡಲಾಗಿದೆ.

ಈ ಕೆರೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆರೂರ, ಉಮರಾಣಿ, ತದ್ದೇವಾಡಿ, ಟಾಕಳಿ ಹಾಗೂ ಕಂಚನಾಳ ಗ್ರಾಮಗಳು ಒಳಪಡುತ್ತವೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Leave a Reply

ಹೊಸ ಪೋಸ್ಟ್‌