ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಯೋಗೋತ್ಸವ ಕಾರ್ಯಕ್ರಮ

ವಿಜಯಪುರ: ಯೋಗೋತ್ಸವದ ಅಂಗವಾಗಿ ಮಾನವೀಯತೆಗಾಗಿ ಯೋಗ ಕಾರ್ಯಕ್ರಮ ನಗರದ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ನಡೆಯಿತು.

ಕಾತ್ರಾಳ ಗುರುದೇವ ಆಶ್ರಮದ ಡಾ. ಅಮೃತಾನಂದ ಸ್ವಾಮೀಜಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಯೋಗ ಮತ್ತು ವ್ಯಾಯಾಮ ವಿಜ್ಞಾನ ಕೇಂದ್ರ, ಶರೀರಶಾಸ್ತ್ರ ವಿಭಾಗ ಮತ್ತು ನವದೆಹಲಿಯ ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು.

ವಿಜಯಪುರ ನಗರದ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಯೋಗೋತ್ಸವ ಕಾರ್ಯಕ್ರಮ ನಡೆಯಿತು

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್. ಎಸ್. ಮುಧೋಳ, ವೈದ್ಯಕೀಯ ಮಹಾವಿದ್ಯಾಲಯದ ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

ಯೋಗ ಮತ್ತು ವ್ಯಾಯಾಮ ವಿಜ್ಞಾನ ವಿಭಾಗದ ಡಾ. ಜ್ಯೋತಿ ಖೋದ್ನಾಪುರ, ಯೋಗ ತರಬೇತುದಾರ ಎಂ. ಪಿ. ದೊಡ್ಡಮನಿ ಅವರು ಸೂರ್ಯ ನಮಸ್ಕಾರ ಆಸನಗಳು ಮತ್ತು ಪ್ರಾಣಾಯಾಮವನ್ನು ಪ್ರದರ್ಶಿಸಿದರು.

Leave a Reply

ಹೊಸ ಪೋಸ್ಟ್‌