ಜಾಗತಿಕವಾಗಿ ಯಶಸ್ವಿಯಾಗಲು ಸ್ಪರ್ಧಾತ್ಮಕ ಶಿಕ್ಷಣ ನೀಡುವುದು ರಾಷ್ಟ್ರೀಯ ಶಿಕ್ಷಣ ನೀತಿ ಉದ್ದೇಶವಾಗಿದೆ- ಪ್ರೊ. ವೈ. ಎಸ್. ಸಿದ್ದೇಗೌಡ

ವಿಜಯಪುರ: ಜಾಗತಿಕ ಮಟ್ಟದ ಸ್ಪರ್ಧಾತ್ಮಕ ವಾತಾವರಣದಲ್ಲಿ ಯಶಸ್ವಿಯಾಗುವಂಥ ಶಿಕ್ಷಣ ನೀಡುವುದು ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ. ವೈ. ಎಸ್. ಸಿದ್ದೇಗೌಡ ಹೇಳಿದ್ದಾರೆ.  ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ಕೃತಕ ಬುದ್ದಿಮತ್ತೆ ಬೋಧನಾ ಕೌಶಲಗಳು ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ನಾನಾ ಕೌಶಲಯುತ ಶಿಕ್ಷಣ, ಜ್ಞಾನ ಸಂಪಾದಿಸುವ ಮೂಲಕ ಜೀವನದ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಹ […]