ಡಿಜಿಟಲ್ ಇಂಡಿಯಾ ವಿಶ್ವದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಮುಂಚೂಣಿ ರಾಷ್ಟ್ರವಾಗಿರಲು ಕೊಡುಗೆ ನೀಡಿದೆ- ಡಾ. ಹರಿಕೃಷ್ಣ ಮಾರಮ

ವಿಜಯಪುರ: ಜಾಗತಿಕ ಮಟ್ಟದ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಮುಂಚೂಣಿ ರಾಷ್ಟ್ರವಾಗಿರುವುದಕ್ಕೆ ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ಕೊಡುಗೆ ಅಪಾರವಾಗಿದೆ ಎಂದು ಡಿಜಿಟಲ್ ಬ್ರ್ಯಾಂಡ ಅಂಬ್ಯಾಸಡರ್ ಹಾಗೂ ವಿಜನ್ ಡಿಜಿಟಲ್ ಇಂಡಿಯಾದ ಅಧ್ಯಕ್ಷ ಡಾ. ಹರಿಕೃಷ್ಟ ಮಾರಮ ಅಭಿಪ್ರಾಯಪಟ್ಟರು. ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವ್ಯವಹಾರ ಅಧ್ಯಯನ ವಿಭಾಗ ನವದೆಹಲಿಯ ಐ ಸಿ ಎಸ್‍ ಎಸ್‍ ಆರ್ ಸಹಯೋಗದೊಂದಿಗೆ ‘ಜಾಗತಿಕ ಯುಗದಲ್ಲಿ ಡಿಜಿಟಲ್ ಇಂಡಿಯಾ ಭವಿಷ್ಯದ ನಿರೀಕ್ಷೆಗಳು ವಿಷಯದ ಕುರಿತು ಆಯೋಜಿಸಲಾಗಿರುವ ಎರಡು ದಿನಗಳ […]

ಮುಂಗಾರು ಮಳೆ: ಮುಂಜಾಗ್ರತಾ ಕ್ರಮಗಳ ಪೂರ್ವಸಿದ್ಧತಾ ಸಭೆ- ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಲು ಡಾ. ದಾನಮ್ಮನವರ ಸೂಚನೆ

ವಿಜಯಪುರ:  ಅತಿವೃಷ್ಟಿ ಪರಿಸ್ಥಿತಿ ಹಾಗೂ ಮುಂಬರುವ ಮಳೆಗಾಲ ಸಂದರ್ಭದಲ್ಲಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಎಲ್ಲ ಇಲಾಖಾ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಯಾವುದೇ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮುಂಗಾರು ಮಳೆಯ ಮುಂಜಾಗ್ರತಾ ಕ್ರಮಗಳ ಕುರಿತ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮಳೆಗಾಲದ ಸಂದರ್ಭದಲ್ಲಿ ವಿವಿಧ ಪ್ರದೇಶಗಳ ತಗ್ಗು ಪ್ರದೇಶಗಳಲ್ಲಿ ನೀರು ಹರಿಯದೇ ಒಂದೇ ಕಡೆ ನಿಲ್ಲುವುದರಿಂದ […]

ಆಲಿಕಲ್ಲು ಮಳೆಯಿಂದಾಗಿ ಬೆಳೆಹಾನಿ- ಪರಿಹಾರಕ್ಕೆ ಆಗ್ರಹಿಸಿ ಜಂಬಗಿ (ಆ) ಗ್ರಾಮಸ್ಥರಿಂದ ಡಿಸಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ವಿಜಯಪುರ ತಾಲೂಕಿನ ಜಂಬಗಿ (ಆ) ಗ್ರಾಮದಲ್ಲಿ ಸುರಿದ ಆಲಿಕಲ್ಲು ಸಹಿತ ಭಾರಿ ಮಳೆಯಿಂದ ಅಪಾರ ಬೆಳೆ ಹಾನಿಯಾಗಿದ್ದು, ರೈತರಿಗೆ ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರಿಗೆ ಮನವಿ ಪತ್ರ ಸಲ್ಲಿಸಿದರು.  ಬುಧವಾರ ಸಂಜೆ ಸುರಿದ ಗಾಳಿ, ಆಲಿಕಲ್ಲು ಸಹಿತ ಮಳೆಯಿಂದಾಗಿ ಗ್ರಾಮದಲ್ಲಿ ಬೆಳೆದ ದಾಳಿಂಬೆ, ದ್ರಾಕ್ಷಿ, ನಿಂಬೆ, ಮಾವಿನ ಗಿಡಗಳು ಧರೆಗುರುಳಿವೆ.  ಅಲ್ಲದೇ, ರೈತರ ವಾಸಿಸುತ್ತಿದ್ದ ಪತ್ರಾಸ ಶೆಡ್ಡುಗಳು ಕೂಡ ಕಿತ್ತು ಹೋಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.  […]

ಎಂಜಿನಿಯರುಗಳು ಉದ್ಯೋಗ ಸೃಷ್ಠಿಸಬೇಕೇ ಹೊರತು ಉದ್ಯೋಗ ಹುಡುಕುವಂತಾಗಬಾರದು- ಡಿಸಿ ಡಾ. ದಾನಮ್ಮನವರ

ವಿಜಯಪುರ: ಎಂಜಿನಿಯರುಗಳು ಉದ್ಯೋಗ ಸೃಷ್ಠಿಕರ್ತರಾಗಬೇಕೇ ಹೊರತು ಉದ್ಯೋಗ ಹುಡುಕುವಂತಾಗಬಾರದು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದ್ದಾರೆ. ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೂರು ದಿನಗಳ ಓಪನಡೇ, ಇನವಿಕ್ಟಸ್ ತಾಂತ್ರಿಕ ಉತ್ಸವ ಹಾಗೂ ಸಂಭ್ರಮ ವಾರ್ಷಿಕ ದಿನಾಚರಣೆ ಮೂರು ದಿನಗಳ ಕಾರ್ಯಕ್ರಮಕ್ಕೆ ನಡೆಯುತ್ತಿದೆ. ಆಕಾಶಕ್ಕೆ ಬಲೂನನ್ನು ಹಾರಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭಾರತ ಆರ್ಥಿಕವಾಗಿ, ತಂತ್ರಜ್ಞಾನ […]