ವಿಜಯಪುರ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಓ ರಾಹುಲ ಶಿಂಧೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ ಶಿಂಧೆ ಅವರು ವಿಜಯಪುರ ತಾಲೂಕಿನ ನಾನಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನಾನಾ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿ ಪರಿಶೀಲನೆ ನಡೆಸಿದರು.

ಹಡಗಲಿ ಎಲ್ ಟಿ  ಗ್ರಾಮದ  ಅಂಗನವಾಡಿ ಕಟ್ಟಡ ನಿರ್ಮಾಣದ ಕಾರ್ಯ ಪರಿಶೀಲಿಸಿದರು. ಹಡಗಲಿ   ಎಲ್ ಟಿ-2 ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ  ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಅಂಗನವಾಡಿ ಮಕ್ಕಳಿಗೆ ಒದಗಿಸುವ ಪೌಷ್ಠಿಕ ಆಹಾರದ ವಿವರ ಪಡೆದುಕೊಂಡರು.  ಹಡಗಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಶಾಲಾ ಕಂಪೌಂಡ್, ಅಡುಗೆ ಕೋಣೆ, ಭೋಜನಾಲಯ, ಶೌಚಾಲಯ ಹಾಗೂ ಬಾಸ್ಕೆಟ್ ಬಾಲ್ ಮೈದಾನ ಕಾಮಗಾರಿ ವೀಕ್ಷಣೆ ಮಾಡಿದರು. ಅಂಗನವಾಡಿ ಕಟ್ಟಡಗಳು ಮತ್ತು ಶಾಲಾ ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಕಳಪೆ ಕಾಮಗಾರಿ ನಡೆಯದಂತೆ ಎಚ್ಚರ ವಹಿಸಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿ. ಪಂ. ಸಿಇಓ ರಾಹುಲ ಶಿಂಧೆ ವಿಜಯಪುರ ತಾಲೂಕಿನ ನಾನಾ ಗ್ರಾ. ಪಂ. ಗಳಿಗೆ ಭೇಟಿ ನೀಡಿ ನಾನಾ ಕಾಮಗಾರಿ ಪರಿಶೀಲನೆ ನಡೆಸಿದರು

ಗ್ರಾಮ ಪಂಚಾಯಿತಿಯಲ್ಲಿ ಲಭ್ಯ ಅನುದಾನದಲ್ಲಿ ಶಾಲಾ ಕೊಠಡಿಗಳ ದುರಸ್ತಿಗೆ ಆದ್ಯತೆ ನೀಡುವಂತೆ ಪಿಡಿಓ ಗಳಿಗೆ ಸೂಚನೆ ನೀಡಿದ ಅವರು. ಗ್ರಾ. ಪಂ. ಕಾರ್ಯಾಲಯಕ್ಕೆ ಭೇಟಿ ನೀಡಿ ಗ್ರಾಮದಲ್ಲಿ ನೀರಿನ ಗುಣಮಟ್ಟ ಪರೀಕ್ಷಿಸಿದರು.  ಅಲ್ಲದೇ, ಕುಡಿಯುವ ನೀರಿನ ಮೂಲ ಮತ್ತು ಸುತ್ತಮುತ್ತಲೂ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುವಂತೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಆರೋಗ್ಯ ಅಭಿಯಾನದ ಲಾಭ ಪಡೆಯಿರಿ

ನರೇಗಾ ಕೂಲಿಕಾರ್ಮಿಕರಿಗೆ ವಿಜಯಪುರ ತಾಲೂಕಿನ ಹಡಗಲಿ ಗ್ರಾಮ ಪಂಚಾಯುತಿ ವ್ಯಾಪ್ತಿಯ ನರೇಗಾ ಕಾಮಗಾರಿ ಸ್ಥಳದಲ್ಲಿ ಕೆ. ಎಚ್. ಪಿ. ಟಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಆರೋಗ್ಯ ಅಭಿಯಾನಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದ ಸಿಇಓ ಅವರು, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಮೇ 22 ರಿಂದ ಗ್ರಾಮ ಆರೋಗ್ಯ ಅಭಿಯಾನ ನಡೆಸಲಾಗುತ್ತಿದೆ.  ಈ ಅಭಿಯಾನದ ಅಂಗವಾಗಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಾರ್ಯ ನಿರ್ವಹಿಸುವ ಎಲ್ಲ ಕೂಲಿ ಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮತ್ತು ಸಮಾಲೋಚನೆ ನಡೆಸಲಾಗುತ್ತಿದೆ.  ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರೂ ಸೇರಿದಂತೆ ಸದೃಢ ಆರೋಗ್ಯಕ್ಕಾಗಿ ಈ ಅಭಿಯಾನ ಆಯೋಜಿಸಲಾಗಿದೆ.  ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಹಿತ ದೃಷ್ಟಿಯಿಂದ ಸರಕಾರ ಈ ಅಭಿಯಾನವನ್ನು ಜಾರಿಗೆ ತರುವ ಮೂಲಕ ನರೇಗಾ ಕೂಲಿ ಕಾರ್ಮಿಕರು ತಾವು ಕೆಲಸ ನಿರ್ವಹಿಸುವ ಸ್ಥಳದಲ್ಲಿಯೇ ಅವರಿಗೆ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

 

ಈಗಾಗಲೇ ಕೆ. ಎಚ್. ಪಿ. ಟಿ ಸಹಯೋಗದಲ್ಲಿ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಈ ಅಭಿಯಾನ ನಡೆಯುತ್ತಿದೆ.  ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಅಭಿಯಾನವನ್ನು ಆಯೋಜಿ,ಲು ಎಲ್ಲ ಪಿಡಿಓಗಳಿಗೆ ಮತ್ತು ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡಲಾಗಿದ್ದು, ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ದೃಷ್ಟಿಯಿಂದ ಆನಲೈನ್ ತರಬೇತಿ ಸಹ ನೀಡಲಾಗಿದೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ತಾಲೂಕ ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಕೆ. ಹೊಂಗಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಸಲಾಬಾಯಿ ಪಿ. ಜಾಧವ, ಉಪಾಧ್ಯಕ್ಷ ಬಾಪುಗೌಡ ಬಿ. ಬಿರಾದಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್. ಸಿ. ಮ್ಯಾಗೇರಿ, ದೀಪಾಕ್ಷಿ ಜಾನಕಿ, ಅರಣ್ಯ ಅಧಿಕಾರಿ ಗಿರೀಶ ಹಲಕುಡೆ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಕಾಶಿಮಸಾಬ ಮಸಳಿ, ತಾಲೂಕು ಆರೋಗ್ಯ ಅಧಿಕಾರಿ ಆರ್. ಎಸ್. ಪಾಟೀಲ, ಆರೋಗ್ಯ ಇಲಾಖೆಯ ಅಧಿಕಾರಿ ಎ. ಟಿ. ಸೂರ್ಯವಂಶಿ, ಕುಮಾರಿ ಲಕ್ಷ್ಮಿ ಅಗಸಿಬಾಗಿಲ, ಪಿಡಿಓ ಗಳಾದ ಆರ್.  ಎಸ್. ಗಾಯಕವಾಡ  ಸೇರಿದಂತೆ ನಾನಾ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌