ಅಗ್ನಿ ಅವಘಡ ಮುಂಜಾಗ್ರತೆ ಕ್ರಮ ಕುರಿತು ಅಣುಕು ಪ್ರದರ್ಶನ

ವಿಜಯಪುರ: ಜಿಲ್ಲಾ ವಿಪತ್ತು ನಿರ್ವಹಣಾ ಕೋಶ, ಕಾರ್ಖಾನೆ ಹಾಗೂ ಬಾಯ್ಲರಗಳ ಇಲಾಖೆ ಮತ್ತು ನಂದಿ ಸಕ್ಕರೆ ಕಾರ್ಖಾನೆ ಇವರ ವತಿಯಿಂದ ಬಬಲೇಶ್ವರ ತಾಲೂಕಿನ ಗಲಗಲಿಯ ನಂದಿ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡಗಳಲ್ಲಿ ಜಾಗೃತಿ-ಅನುಸರಿಸಬೇಕಾದ ಕ್ರಮಗಳ ಕುರಿತು ಅಣುಕು ಪ್ರದರ್ಶನ ನಡೆಯಿತು.

ಗಲಗಲಿಯ ನಂದಿ ಸಕ್ಕರೆ ಕಾರ್ಖಾನೆ ಅವರಣದಲ್ಲಿ ಅಗ್ನಿ ಅವಘಡ ಮುಂಜಾಗ್ರತೆ ಅಣಕು ಪ್ರದರ್ಶನ ನಡೆಯಿತು

ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಮಾರ್ಗದರ್ಶನದಂತೆ ಅಣುಕು ಪ್ರದರ್ಶನ ನಡೆಸಲಾಯಿತು.

ಅಪಾಯದ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗೃತೆ ಕ್ರಮಗಳು ಹಾಗೂ ತೆಗೆದುಕೊಳ್ಳಬೇಕಾದ ಸುರಕ್ಷತೆ ಕುರಿತು ನಂದಿ ಸಕ್ಕರೆ ಕಾರ್ಖಾನೆಯ ಸುಮಾರು 300ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಈ ಅಣುಕು ಪ್ರದರ್ಶನದ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಖಾನೆ ಮತ್ತು ಬಾಯ್ಲರ್ ಗಳ ಉಪನಿರ್ದೇಶಕ ವೆಂಕಟೇಶ ರಾಠೋಡ, ನಂದಿ ಸಕ್ಕರೆ ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕ ವೀರಣ್ಣಗೌಡ ದೇಸಾಯಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣೆ ಶಾಖೆಯ ರಾಕೇಶ ಜೈನಾಪುರ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌