ತಾಯಿಗಿಂತಲೂ ಮಿಗಿಲಾದ ದೇವರಿಲ್ಲ-ಎಲ್ಲ ಪದಗಳ ಮೂರ್ತರೂಪವೇ ತಾಯಿ- ಎಂ. ಬಿ. ಪಾಟೀಲ ಭಾವನಾತ್ಮಕ ಟ್ವೀಟ್

ವಿಜಯಪುರ: ಮೂರನೇ ಬಾರಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ತಮ್ಮ ತಾಯಿ ಕಮಲಾಬಾಯಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ತಾಯಿಗಿಂತಲೂ ಮಿಗಿಲಾದ ದೇವರಿಲ್ಲ.  ಮಮತೆ, ಪ್ರೀತಿ-ವಾತ್ಸಲ್ಯ ತ್ಯಾಗ, ಅನುಕಂಪ ಹೀಗೆ ಎಲ್ಲ ಪದಗಳ ಮೂರ್ತರೂಪವೇ ತಾಯಿ.  ನನ್ನ ಬೆಳವಣಿಗೆ, ಏಳಿಗೆ, ಶ್ರೇಯಸ್ಸು-ಯಶಸ್ಸು ಎಲ್ಲಕ್ಕೂ […]

40% ಭ್ರಷ್ಟಾಚಾರ, ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಗ್ಯಾರಂಟಿ ಸ್ಕೀಂ ಗಳಿಗೆ ಹಣ ಹೊಂದಿಸುತ್ತೇವೆ- ಎಂ. ಬಿ. ಪಾಟೀಲ

ವಿಜಯಪುರ: 40% ಭ್ರಷ್ಟಾಚಾರಕ್ಕೆ ಮತ್ತು ದುಂದುವೆಚ್ಚಕ್ಕೆ ಕಡಿವಾಣ ಹಾಕುತ್ತೇವೆ.  ನಿರುಪಯುಕ್ತ ಯೋಜನೆಗಳನ್ನು ಕೈಬಿಟ್ಟು ಇತರ ಯೋಜನೆಗಳಿಗೆ ತೊಂದರೆಯಾಗದಂತೆ ಕಾಂಗ್ರೆಸ್ ಗ್ಯಾರಂಟಿ ಸ್ಕೀಂಗಳಿಗೆ ಸಿಎಂ ನೇತೃತ್ವದಲ್ಲಿ ಹಣ ಹೊಂದಿಸುತ್ತೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013- 18ರ ಅವಧಿಯಲ್ಲಿ ಜಲಸಂಪನ್ಮೂಲ ಸಚಿವನಾಗಿ ವಿಜಯಪುರ ಜಿಲ್ಲೆಗೆ ಅಂಟಿದ್ದ ಬರಪೀಡಿತ ಜಿಲ್ಲೆ ಹಣೆಪಟ್ಟಿ ಹೋಗಲಾಡಿಸಲು ಯಶಸ್ವಿಯಾಗಿದ್ದೇನೆ.  ಈಗ ಕೈಗಾರಿಕೆ ಸಚಿವನಾಗಿ ರಾಜ್ಯಾದ್ಯಂತ […]