ಕುಡಿಯುವ ನೀರು ಪೂರೈಕೆಗೆ ಆಗ್ರಹ- ಕಾರ್ಪೋರೇಟರ್ ಶಿವರುದ್ರ ಬಾಗಲಕೋಟ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ- ಪಿಎಸ್ಐ ಜೊತೆ ಮಾತಿನ ಚಕಮಕಿ

ವಿಜಯಪುರ: ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಕಾರ್ಪೋರೇಟರ್ ಶಿವರುದ್ರ ಬಾಗಲಕೋಟ ನೇತೃತ್ವದಲ್ಲಿ ಸ್ಥಳೀಯರು ನಗರದ ಜೋರಾಪುರ ಪೇಟೆಯಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿವರುದ್ರ ಬಾಲಕೋಟ, ನಗರಾದ್ಯಂತ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ.  ತಿಂಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.  ಇದರಿಂದ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ.  ಕೂಡಲೇ ಸಮಸ್ಯೆ ಬಗೆಹರಿಸಿ ಕುಡಿಯಲು ನೀರು ಪೂರೈಸಬೇಕು ಎಂದು ಆಗ್ರಹಿಸಿದರು.

ವಿಜಯಪುರ ನಗರದಲ್ಲಿ ಕುಡಿಯಲು ನೀರು ಪೂರೈಸಲು ಆಗ್ರಹಿಸಿ ಕಾರ್ಪೋರೇಟರ್ ಶಿವರುದ್ರ ಬಾಗಲಕೋಟ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದರು

ಈ ಸಂದರ್ಭದಲ್ಲಿ ರಸ್ತೆ ಸಂಚಾರಕ್ಕೆ ಅನುಕೂಲ ಮಾಡುವಂತೆ ಗಾಂಧಿಚೌಕ್ ಪಿ ಎಸ್ ಐ ರಬಕವಿ ಹೇಳಿದಾಗ ಶಿವರುದ್ರ ಬಾಗಲಕೋಟ ಮತ್ತು ಪಿ ಎಸ್ ಐ ನಡುವೆ ಮಾತಿನ ಚಕಮಕಿ ನಡೆಯಿತು.  ಪಿ ಎಸ್ ಐ ಮಾತಿಗೆ ಒಪ್ಪದೆ ಸ್ಥಳೀಯರು ರಸ್ತೆ ತಡೆ ಮುಂದುವರೆಸಿದರು.  ಬೈಕ್ ಸವಾರರೊಬ್ಬರು ರಸ್ತೆ ದಾಟಿ ಮುನ್ನಡೆಯುವಾಗ ಮಹಿಳೆಯರು ಆ ಬೈಕ್ ನ್ನು ತಡೆದು ನಿಲ್ಲಿಸಿದ ಘಟನೆಯೂ ನಡೆಯಿತು.  ಆಗ ಮಧ್ಯ ಪ್ರವೇಶಿಸಿದ ಪೊಲೀಸರು ಬೈಕ್ ಸವಾರ ತೆರಳಲು ಅನುವು ಮಾಡಿಕೊಟ್ಟರು.

ಈ ಮಧ್ಯೆ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಜಲಮಂಡಳಿ ಅಧಿಕಾರಿಗಳು ಕುಡಿಯುವ ನೀರು ಪೂರೈಕೆ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.  ಆಗ, ಸ್ಥಳೀಯರು ಪ್ರತಿಭಟನೆಯನ್ನು ಹಿಂಪಡೆದರು.

Leave a Reply

ಹೊಸ ಪೋಸ್ಟ್‌