ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ನೇತೃತ್ವದಲ್ಲಿ ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿದ ಪತ್ರಕರ್ತರು- ನಾನಾ ಬೇಡಿಕೆ ಈಡೇರಿಸಲು ಮನವಿ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕಾನಿಪ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು. ರಾಜ್ಯದ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ರೂ. 500 ಕೋ. ಅನುದಾನವನ್ನು ಮೀಸಲಿಡುವುದಾಗಿ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿರುವುದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದರು.  ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಯಶಸ್ವಿನಿ ಯೋಜನೆಗೆ ಪತ್ರಕರ್ತರ ಸೇರ್ಪಡೆ,  ಮಾಸಾಶನ ಹೆಚ್ಚಳ, ಕಾರ್ಮಿಕ ಇಲಾಖೆಯ ಮೂಲಕ ಅಗತ್ಯ ಸೌಲಭ್ಯಗಳು, ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ […]

ಜೂ. 17, 18 ರಂದು ಬಸವ ನಾಡಿನಲ್ಲಿ ರಾಜ್ಯ ಮಟ್ಟದ 11ನೇ ಕದಳಿ ಮಹಿಳಾ ಸಮಾವೇಶ

ವಿಜಯಪುರ: ಜೂ. 17 ಮತ್ತು 18 ರಂದು ಬಸವ ನಾಡು ವಿಜಯಪುರದಲ್ಲಿ ರಾಜ್ಯ ಮಟ್ಟದ ಕದಳಿ ಸಮಾವೇಶ ನಡೆಯಲಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅಪ್ಪಾರಾವ ಅಕ್ಕೋಣಿ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವ ನಾಡಿನಲ್ಲಿ ಇದೇ ಮೊದಲ ಬಾರಿಗೆ ಮೈಸೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ, ಜಿಲ್ಲಾ ಶರಣ ಸಾಹಿತ್ಯ ಪರಿಷತ, ರಾಜ್ಯ ಮತ್ತು ಜಿಲ್ಲಾ ಕದಳಿ ಮಹಿಳಾ ವೇದಿಕೆಗಳ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ಗುರು ಸಂಗನಬಸವ ಸಮುದಾಯ […]

70 ಜನ ಹೊಸಬರಿಗೆ ಟಿಕೆಟ್ ನೀಡಿದ್ದೂ ಸೋಲಿಗೆ ಕಾರಣ- ಈ ನಿರ್ಧಾರ ಮಾಡಿದವರನ್ನು ನೇಣಿಗಾದರೂ ಹಾಕಿ, ಕಾಲನ್ನಾದರೂ ತೆಗೀರಿ- ರಮೇಶ ಜಿಗಜಿಣಗಿ

ವಿಜಯಪುರ: 70 ಜನ ಹೊಸಬರಿಗೆ ಟೆಕೆಟ್ ನೀಡಿದ್ದೂ ಬಿಜೆಪಿ ಸೋಲಿಗೆ ಪ್ರಮುಖ ಕಾರಣ.  ಈ ನಿರ್ಧಾರ ಕೈಗೊಂಡವರನ್ನು ನೇಣಿಗಾದರೂ ಹಾಕಿ ಅಥವಾ ಅವರ ಕಾಲನ್ನಾದರೂ ತೆಗೆಯಿರಿ.  ಅದಕ್ಕೂ ನನಗೂ ಸಂಬಂಧವಿಲ್ಲ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಕಿಡಿ ಕಾರಿದ್ದಾರೆ. ವಿಜಯಪುರ ನಗರದ ಹೊರವಲಯದಲ್ಲಿರುವ ಅಲಿಯಾಬಾದ ಗುಡ್‌ ಶೆಡ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. 70 ಜನ ಹೊಸಬರಿಗೆ ಟಿಕೆಟ್ ಕೊಡುವ ಅವಶ್ಯಕತೆ ಇರಲಿಲ್ಲ.  ಹೊಸಬರಿಗೆ ಅವಕಾಶ ನೀಡಿಬೇಕು.  […]