ಸಚಿವ ಎಂ. ಬಿ. ಪಾಟೀಲರ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಡಾ. ಮಹಾಂತೇಶ ಬಿರಾದಾರ ನೇಮಕ

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಡಾ. ಮಹಾಂತೇಶ ಬಿರಾದಾರ ಅವರನ್ನು ನೇಮಕ ಮಾಡಲಾಗಿದೆ. 

ಸದಾ ಸಮಾಜಪರ ಚಟುವಟಿಕೆಯಿಂದ ಹೆಸರು ಮಾಡಿರುವ ಡಾ. ಮಹಾಂತೇಶ ಬಿರಾದಾರ ಅವರು ಎಂ. ಬಿ. ಪಾಟೀಲರು ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದಾಗ ಮಾಧ್ಯಮ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.  ಈಗ ಅವರನ್ನು ಸಚಿವ ಎಂ. ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನೇಮಕ ಮಾಡಲಾಗಿದೆ.  ಬೆಂಗಳೂರಿನ ಖನಿಜ ಭವನದಲ್ಲಿನ ಉದ್ಯಮಿ ಮಿತ್ರ ಕಚೇರಿಯಿಂದ ಈ ನೇಮಕಾತಿ ಆದೇಶ ಹೊರ ಡಿಸಲಾಗಿದೆ.

ಡಾ. ಮಹಾಂತೇಶ ಬಿರಾದಾರ ಅವರಿಗೆ ಹೊಸ ಜವಾಬ್ದಾರಿ ಸಿಕ್ಕಿರುವುದು ಅವರ ಸ್ನೇಹಿತರು ಮತ್ತು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

Leave a Reply

ಹೊಸ ಪೋಸ್ಟ್‌