ಜೂ. 20 ರಂದು ವಿಜಯಪುರದಲ್ಲಿ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಚರ್ಚೆ ಕುರಿತು ಪೂರ್ವಭಾವಿ ಸಭೆ

ವಿಜಯಪುರ: ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ವತಿಯಿಂದ ಜೂ. 20 ರಂದು ಮಂಗಳವಾರ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸಲು ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಎಂದು ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಡಾ. ಕೆ. ಎಚ್. ಮುಂಬಾರಡ್ಡಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜೂ. 20 ರಂದು ಬೆ. 11ಕ್ಕೆ ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಹತ್ತಿರದ ಕನಕದಾಸ ಬಡಾವಣೆಯಲ್ಲಿರುವ ಕೃಷಿ ತಂತ್ರಜ್ಞಾನ ಸಂಸ್ಥೆಯಲ್ಲಿ ಒಣ ದ್ರಾಕ್ಷಿ ಸಮಸ್ಯೆ ಕುರಿತು […]

ಆಲಮೇಲದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿ ಡಾ. ದಾನಮ್ಮನವರ ಸೂಚನೆ

ವಿಜಯಪುರ: ನೂತನ ತಾಲೂಕು ಕೇಂದ್ರವಾಗಿರುವ ಆಲಮೇಲದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಹಸೀಲ್ದಾರಗೆ ಸೂಚನೆ ನೀಡಿದ್ದಾರೆ. ಆಲಮೇಲದ ರಾಯಲ್ ಫಂಕ್ಷನ್ ಹಾಲ್‍ನಲ್ಲಿ ನಡೆದ ಮೀಸಲಾತಿ ನಿಗದಿ ಸಭೆಯ ನಂತರ ಆಲಮೇಲ ನಗರದಲ್ಲಿ ಮಿನಿ ವಿಧಾನಸೌಧ ನಿರ್ಮಾಣದ ಉದ್ದೇಶಿತ ಸ್ಥಳಕ್ಕೆಅವರು ಸಿಂದಗಿ ಶಾಸಕ ಅಶೋಕ ಮನಗೂಳಿ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಯುಕೆಪಿ ಕ್ವಾಟರ್ಸ್ ಸರ್ವೆ ನಂಬರ್ 606ರಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಡಿಸಿ […]