ಕೇಂದ್ರ ಸರಕಾರದಿಂದ ದ್ವೇಷ ರಾಜಕಾರಣ ಆರೋಪ- ಗುಮ್ಮಟ ನಗರಿಯಲ್ಲಿ ಕೈ ಕಾರ್ಯಕರ್ತರಿಂದ ಪ್ರತಿಭಟನೆ

ವಿಜಯಪುರ: ಕೇಂದ್ರ ಸರಕಾರ ಅಕ್ಕಿ ವಿತರಣೆ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ನಾನಾ ಮುಖಂಡರು, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದ ಜನತೆಗೆ ಐದು ಜನಪರ ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಹೇಳಿತ್ತು.  ಅದರಲ್ಲಿ ಅನ್ನಭಾಗ್ಯ ಯೋಜನೆಯೂ ಒಂದಾಗಿದೆ.  ರಾಜ್ಯ ಹಸಿವು ಮುಕ್ತವಾಗಬೇಕು ಎಂಬ ಒಳ್ಳೆಯ ಉದ್ದೇಶದಿಂದ ಬಡವರಿಗೆ ತಲಾ 10 […]

ಅನ್ನಭಾಗ್ಯ ಅಕ್ಕಿ ವಿಚಾರ- ಕೇಂದ್ರ ಈ ಯೋಜನೆಯಡಿ ನೀಡುವ ಅಕ್ಕಿ ಪ್ರಮಾಣ, ಸರಕಾರದ ಪಾತ್ರದ ಬಗ್ಗೆ ಸಿಎಂ ಸ್ಪಷ್ಟಪಡಿಸಲಿ- ರಮೇಶ ಜಿಗಜಿಣಗಿ

ವಿಜಯಪುರ: ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ನೀಡುವ ಅಕ್ಕಿ ಪ್ರಮಾಣ ಮತ್ತು ಇದರಲ್ಲಿ ರಾಜ್ಯ ಸರಕಾರದ ಪಾತ್ರವನ್ನು ಮುಖ್ಯಮಂತ್ರಿ ಎಸ್. ಸಿದ್ಧಾರಮಯ್ಯ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಆಗ್ರಹಿಸಿ್ದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ಯೋಜನೆಯಲ್ಲಿ ಕೇಂದ್ರ ಸರಕಾರದ ಪಾತ್ರವನ್ನು ಸ್ಪಷ್ಟವಾಗಿ ಜನರ ಮುಂದೆ ಹೇಳುವ ಮೂಲಕ ಜನರಲ್ಲಿರುವ ಗೊಂದಲವನ್ನು ನಿವಾರಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಕ್ಕಿ ವಿಷಯವಾಗಿ ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ರಾಜ್ಯ ಸರಕಾರ ಜನರ ದಿಕ್ಕು […]

ವಿದ್ಯುತ್ ದರ ಹೆಚ್ಚಳಕ್ಕೆ ವಿರೋಧ- ಜೂ. 22 ರಂದು ವಿಜಯಪುರ ಬಂದ್ ಗೆ ಕರೆ ನೀಡಿದ ನಾನಾ ಸಂಘಟನೆಗಳು

ವಿಜಯಪುರ: ವಿದ್ಯುತ್ ದರ ಹೆಚ್ಚಳ ವಿರೋಧಿಸಿ ನಾನಾ ಸಂಘಟನೆಗಳು ಜೂ. 22ರಂದು ವಿಜಯಪುರ ಬಂದ್ ಕರೆ ನೀಡಿವೆ. ಮರ್ಚಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ರವೀಂದ್ರ ಬಿಜ್ಜರಗಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಾನಾ ಸಂಘಟನೆಗಳ ಮುಖಂಡರು ಪಾಲ್ಗೋಂಡು ಈ ನಿರ್ಧಾರ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ನಾನಾ ಮುಖಂಡರು, ರಾಜ್ಯ ಸರಕಾರ ವಿದ್ಯುತ ದರವನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿದೆ.  ಇದರಿಂದಾಗಿ ಕೈಗಾರಿಕೋದ್ಯಮಕ್ಕೆ ಹೊಡೆತ ಬೀಳಲಿದೆ.  ಗ್ರಾಹಕರಿಗೂ ಇದು ಹೊರೆಯಾಗಲಿದೆ.  ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ಔದ್ಯೋಗಿಕ ರಂಗ, ಆಯಿಲ್ ಮಿಲ್, ಜಿನ್ನಿಂಗ […]

ಮತಾಂತರ ನಿಷೇಧ ಕಾನೂನು ಹಿಂಪಡೆಯುವ ಸರಕಾರದ ನಿರ್ಧಾರಕ್ಕೆ ವಿರೋಧ- ವಿ ಎಚ್ ಪಿ ಕಾರ್ಯಕರ್ತರಿಂದ ಪ್ರತಿಭಟನೆ, ಮನವಿ ಪತ್ರ ಸಲ್ಲಿಕೆ

ವಿಜಯಪುರ: ರಾಜ್ಯ ಸರಕಾರ ಮತಾಂತರ ನಿಷೇಧ ಕಾನೂನನ್ನು ಹಿಂಪಡೆಯಲು ನಿರ್ಧರಿಸಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.  ಅಲ್ಲದೇ, ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ ಕರ್ನಾಟಕ ಉತ್ತರ ಪ್ರಾಂತ ಪ್ರಚಾರ ಪ್ರಸಾರ ಪ್ರಮುಖ ಸುನೀಲ ಭೈರವಾಡಗಿ, ಭಾರತವು ಹಿಂದೂ ರಾಷ್ಟ್ರವಾಗಿದ್ದು ಇಲ್ಲಿ ಹಿಂದುಗಳೊಡನೆ ಅನ್ಯ ಧರ್ಮೀಯರೂ ಸಹ ಸಹಬಾಳ್ವೆಯನ್ನು ಮಾಡಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ.  ಅದರಂತೆ ಕರ್ನಾಟಕದಲ್ಲಿಯೂ ಹಿಂದೂಗಳೊಡನೆ, ಅನ್ಯ ಧರ್ಮೀಯರೂ ಸಹ ತಮ್ಮ […]