ಕೆ ಇ ಆರ್ ಸಿ ವಿದ್ಯುತ್ ದರ ಹೆಚ್ಚಿಸಿದೆ- ಜುಲೈ ಮೊದಲ ವಾರ ದೆಹಲಿಗೆ ಭೇಟಿ ನೀಡುತ್ತೇನೆ- ಎಂ. ಬಿ. ಪಾಟೀಲ

ವಿಜಯಪುರ: ವಿದ್ಯುತ್ ದರ ಹೆಚ್ಚಳ ಸರಕಾರ ಕೈಗೊಂಡ ನಿರ್ಧಾರವಲ್ಲ.  ಅದು ಸ್ವಾಯತ್ತ ಸಂಸ್ಥೆಯಾಗಿರುವ ಕೆ. ಇ. ಆರ್‌. ಸಿ ಮಾಡಿರುವ ತೀರ್ಮಾನವಾಗಿದೆ.  ವಿದ್ಯುತ್ ದರ ಹೆಚ್ಚಳಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರ ಅಧಿಕಾರಕ್ಕೆ ಬರುವ ಮುಂಚೆಯೇ ಕೆ. ಇ. ಆರ್‌. ಸಿ ವಿದ್ಯುತ್ ದರ ಹೆಚ್ಚಳ […]