ಬಿಜೆಪಿ ಸಭೆಯಲ್ಲಿ ಗದ್ದಲ- ಯತ್ನಾಳ ವಿರುದ್ಧ ಹರಿಹಾಯ್ದ ನಿರಾಣಿ, ನಡಹಳ್ಳಿ- ವಾಗ್ದಾಳಿ ಯಾವುದೇ ಗೊಂದಲವಿಲ್ಲ ಎಂದ ಬೊಮ್ಮಾಯಿ

ವಿಜಯಪುರ: ವಿಜಯಪುರ ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಯತ್ನಾಳ ಬೆಂಬಲಿಗರು ಗದ್ದಲ ಎಬ್ಬಿಸಿದ ಘಟನೆ ನಡೆದಿದೆ. ಮಧ್ಯಾಹ್ನ 3 ಗಂಟೆಗೆ ಆರಂಭವಾಗಬೇಕಿದ್ದ ಸಭೆ ಮೂರು ಗಂಟೆ ತಡವಾಗಿ ಸಂಜೆ 6 ಗಂಟೆಗೆ ಆರಂಭವಾಯಿತು.  ನಗರದ ಸಂಗನಬಸವ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದರಾದ ರಮೇಶ ಜಿಗಜಿಣಗಿ, ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತರಾಗಿರುವ ಅಭ್ಯರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಂಸದ […]

ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂಡಿ ಹಾಕಿದ ಆರೋಪ- ಬಂಕ್ ಮಾಲಿಕರ ವಿರುದ್ಧ ಕಠಿಣ ಕ್ರಮಕ್ಕೆ ಸಚಿವರ ಸೂಚನೆ- ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

ವಿಜಯಪುರ: ಡೀಸೆಲ್ ಬಾಕಿ ಹಣ ನೀಡಿಲ್ಲ ಎಂಬ ಆರೋಪದಡಿ ಪೆಟ್ರೋಲ್ ಬಂಕ್ ಮಾಲಿಕರು ವ್ಯಕ್ತಿಯೊಬ್ಬನನ್ನು ಸುಮಾರು 12 ದಿನಗಳಿಂದ ಬಂಕಿನಲ್ಲಿ ಅರೆಬೆತ್ತಲೆಯಾಗಿ ಕೂಡಿ ಹಾಕಿದ ಆರೋಪ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಕೇಳಿ ಬಂದಿದೆ. ಈ ಕುರಿತು ಮಾಧ್ಯಮಗಳ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಸ್ಪಿ ಎಚ್. ಡಿ. ಆನಂದಕುಮಾರ ಅವರಿಗೆ ಕರೆ ಮಾಡಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಕಂದಾಯ ಮತ್ತು […]