ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ ಆಚರಣೆ

ವಿಜಯಪುರ: ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಲೋಯೋಲಾ ಅಂತರರಾಷ್ಟ್ರೀಯ ಕಾಲೇಜಿನಲ್ಲಿ ನಡೆದ ಜಾಥಾವನ್ನು ಲೋಯೋಲಾ ಸಂಸ್ಥೆಯ ಫಾ. ಟೇಲರ್ ಮತ್ತು ಮಾನಸಿಕ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ಎಸ್. ಎಂ. ಗುಣಾರಿ ಜಂಟಿಯಾಗಿ ಚಾಲನೆ ನೀಡಿದರು.

ನಂತರ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಎಸ್. ಎಂ. ಗುಣಾರಿ, ಎಲ್ಲ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು.  ಸ್ವಸ್ಥ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಮುಖ್ಯವಾಗಿದೆ ಎಂದು ಹೇಳಿದರು.

ವಿಜಯಪುರದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ಕಳ್ಳಸಾಗಣೆ ವಿರೋಧಿ ದಿನ ಆಚರಿಸಲಾಯಿತು

 

ಮಾದಕವಸ್ತು ಸೇವನೆ ಹೇಗೆ ತಡೆಗಟ್ಟುವುದು ಮತ್ತು ಇದರ ದುಷ್ಪರಿಣಾಮಗಳ ಕುರಿತು ಮನೋರೋಗ ತಜ್ಞರಾದ ಡಾ. ಮಂಜುನಾಥ ಮಸಳಿ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಎಂ. ಎಸ್. ಬಿರಾದಾರ ಸೇರಿದಂತೆ ಶಿಕ್ಷಕರು ಮತ್ತು ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌