ಲೋಕಾಯುಕ್ತರ ದಾಳಿ- ಬೆಳ್ಳಂಬೆಳಿಗ್ಗೆ ಭ್ರಷ್ಟ್ರ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು

ವಿಜಯಪುರ: ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳ ನಿವಾಸಗಳ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, ಅಧಿಕಾರಿಗಳು ಅಕ್ರಮ ಆಸ್ತಿಪಾಸ್ತಿ ಕುರಿತು ತನಿಖೆ ಕೈಗೊಂಡಿದ್ದಾರೆ.

ವಿಜಯಪುರದಲ್ಲಿರುವ ಲೋಕಾಯುಕ್ತರು ದಾಳಿ ನಡೆಸಿರುವ ಭೀಮನಗೌಡ ಬಿರಾದಾರ ಅವರ ನಿವಾಸ
ಭೀಮನಗೌಡ ಬಿರಾದಾರ

ಬಸವನ ಬಾಗೇವಾಡಿ ಲೋಕೋಪಯೋಗಿ ಇಲಾಖೆ ಪ್ರಭಾರಿ ಎಇಇ ಭೀಮನಗೌಡ ಬಿರಾದಾರ ನಿವಾಸದ ಮೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ವಿಜಯಪುರ ನಗರದ ಆರ್. ಟಿ. ಓ ಕಚೇರಿ ಹಿಂಬದಿಯಲ್ಲಿರುವ ಇವರ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ.  ಲೋಕೋಪಯೋಗಿ ಇಲಾಖೆಯಲ್ಲಿ ಜೆಇ ಆಗಿರುವ ಭೀಮನಗೌಡ ಬಿರಾದಾರ ಇದೇ ಇಲಾಖೆಯ ಪ್ರಭಾರಿ ಎಇಇ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅಷ್ಟೇ ಅಲ್ಲ, ಇವರ ಸಂಬಂಧಿ ಶ್ರೀಕಾಂತ ಅಂಗಡಿ ಅವರ ನಿವಾಸದ ಮೇಲೂ ದಾಳಿ ನಡೆಸಲಾಗಿದ್ದು, ತನಿಖೆ ಮುಂದುವರೆದಿದೆ.

ಸಾಸನೂರಿನಲ್ಲಿಯೂ ಧಾಳಿ

ಮತ್ತೋಂದು ಪ್ರಕರಣದಲ್ಲಿ ಮುದ್ದೇಬಿಹಾಳ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಜೆ. ಪಿ. ಶೆಟ್ಟಿ ಅವರ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಜೆ. ಪಿ. ಶೆಟ್ಟಿ ಅವರಿಗೆ ಸೇರಿದ ಮುದ್ದೇಬಿಹಾಳ ಪಟ್ಟಣದಲ್ಲಿರುವ ಮನೆ ಹಾಗೂ ತಾಳಿಕೋಟೆ ತಾಲೂಕಿನ ಸಾಸನೂರ ಗ್ರಾಮದಲ್ಲಿರುವ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮ ಆಸ್ತಿಪಾಸ್ತಿ ಕುರಿತು ತನಿಖೆ ಕೈಗೊಂಡಿದ್ದಾರೆ.

ಲೋಕಾಯುಕ್ತರು ಮುದ್ದೇಬಿಹಾಳದಲ್ಲಿ ದಾಳಿ ನಜೆಸಿರುವ ಜೆ. ಪಿ. ಶೆಟ್ಟಿ ಅವರ ನಿವಾಸ
ಜೆ. ಪಿ. ಶೆಟ್ಟಿ

ವಿಜಯಪುರ ಲೋಕಾಯುಕ್ತ ಎಸ್ಪಿ ಅನಿತಾ ಹದ್ದನ್ನವರ ನೇತೃತ್ವದಲ್ಲಿ ಈ ಧಾಳಿ ನಡೆಸಲಾಗಿದೆ.  ಒಟ್ಟು ನಾಲ್ಕು ಕಡೆಗಳಲ್ಲಿ ನಡೆದಿರುವ ಈ ದಾಳಿಯಲ್ಲಿ ಮೂರು ಜನ ಡಿವೈಎಸ್ಪಿ, ಏಳು ಜನ ಇನ್ಸಪೆಕ್ಟರ್ ಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದಾರೆ.

ಬೆಳ್ಳಂಬೆಳಿಗ್ಗೆ ನಡೆದಿರುವ ದಾಳಿ ಈಗಲೂ ಮುಂದುವರೆದಿದೆ.

Leave a Reply

ಹೊಸ ಪೋಸ್ಟ್‌