ಬಸವನಾಡಿನ ತಾಳಿಕೋಟೆಯಲ್ಲಿ ನಡೆದ ಶ್ರೀ ಖಾಸ್ಗತ ಮಹಾಶಿವಯೋಗಿಗಳ ಜಾತ್ರೋತ್ಸವ- ಭಾವೈಕ್ಯತೆಗೆ ಸಾಕ್ಷಿಯಾದ ಧಾರ್ಮಿಕ ಕಾರ್ಯಕ್ರಮಗಳು

ವಿಜಯಪುರ: ಜಿಲ್ಲೆಯ ತಾಳಿಕೋಟೆ ಪಟ್ಟಣದ ಶ್ರೀ ಖಾಸ್ಗತ ಮಹಾ ಶಿವಯೋಗಿಗಳ ಜಾತ್ರೋತ್ಸವ ಅದ್ದೂರಿಯಾಗಿ ನಡೆದಿದ್ದು, ಜಾತ್ರೆಯ ಅಂಗವಾಗಿ ನಡೆದ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿ ಕಾರ್ಯಕ್ರಮಗಳು ಜನಮನ ಸೆಳೆದಿವೆ.  ಶ್ರೀ ಖಾಸ್ಗತ ಮಹಾಶಿವಯೋಗಿಗಳ ಗಂಗಸ್ಥಳ ಮತ್ತು ಶ್ರೀಗಳ ಭವ್ಯ ಮೆರಣಿಗೆಯ ಮಹಾ ಕಾರ್ಯಕ್ರಮ ಶ್ರೀ ಮಠದ ನೂತನ ಪೀಠಾಧಿಪತಿ ಶ್ರೀ ಸಿದ್ದಲಿಂಗದೇವರ ನೇತೃತ್ವದಲ್ಲಿ ಅದ್ಧೂರಿಯಾಗಿ ನಡೆಯಿತು.  ಭಾವೈಕ್ಯತೆಗೆ ಸಾಕ್ಷಿಯಾದ ಈ ಕಾರ್ಯಕ್ರಮ ಜನಮನಸೂರೆಗೊಂಡಿತು. ಬೆಳಿಗ್ಗೆ 9 ಘಂಟೆಗೆ ಶ್ರೀ ಖಾಸ್ಗತ ಮಠದಿಂದ ಆನೆ ಅಂಬಾರಿ ಮೇಲೆ ಶ್ರೀ […]

ಹಸುವಿನ ಅಂತ್ಯಕ್ರಿಯೆ ನೆರವೇರಿಸಿ ಗೋಭಕ್ತಿ ತೋರಿದ ಬಸವನಾಡಿನ ಮಾತೋಶ್ರೀ ಕಾಲನಿ ನಿವಾಸಿಗಳು

ವಿಜಯಪುರ: ಬೀಡಾಡಿ ದನಗಳೆಂದರೆ ಸಾಕು ಮಾಲಿಕರು ಗೊತ್ತಾಗದ ಕಾರಣ ಸಾರ್ವಜನಿಕರೂ ಅವುಗಳನ್ನು ನಿರ್ಲಕ್ಷ್ಯಿಸುವುದುಂಟು.  ಆದರೆ, ತಮ್ಮ ಬಡಾವಣೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ತಿರುಗಾಡಿಕೊಂಡಿದ್ದ ಹಸು ಅಸುನೀಗಿಡಾದ ಅದನ್ನು ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಬಸವ ನಾಡಿನ ಜನ ಗಮನ ಸೆಳೆದಿದ್ದಾರೆ. ನಗರದ ವಾರ್ಡನಂ. 12ರಲ್ಲಿ ಬರುವ ಮಾತೋಶ್ರೀ ಕಾಲನಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಬೀಡಾಡಿ ಆಕಳೊಂದು ತಿರುಗಾಡಿಕೊಂಡಿತ್ತು.  ವಿಜಯ ಟಾಯರ್ ಹಿಂದುಗಡೆ ಬರುವ ಬಡಾವಣೆಯಲ್ಲಿ ಬರುವ ಈ ಪ್ರದೇಶದಲ್ಲಿನ ಈ ಹಸು ಸಾವನ್ನಪ್ಪಿದೆ.  ಈ ವಿಷಯ ತಿಳಿದ ಬಟಾವಣೆ […]

ಗಾಂಧಿ ಭವನ ವೀಕ್ಷಿಸಿದ ರಾಜ್ಯ ಹೈಕೋರ್ಟ್ ನ್ಯಾ. ಎಚ್. ಪಿ. ಸಂದೇಶ

ವಿಜಯಪುರ:  ಕರ್ನಾಟಕ ಹೈಕೋರ್ಟಿನ ನ್ಯಾಯಮೂರ್ತಿಗಳಾದ ಎಚ್. ಪಿ. ಸಂದೇಶ್ ಅವರು ಕುಟುಂಬದೊಂದಿಗೆ ಶುಕ್ರವಾರ ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗಾಂಧಿ ಭವನಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಗಾಂಧಿ ಪ್ರತಿಮೆ,ಗಾಂಧೀ ವಿಚಾರ ಧಾರೆಗಳ ಕುರಿತ ಮಾಹಿತಿ ವಿವರ, ಗಾಂಧಿಜಿ ಕುರಿತ ಜಗತ್ತಿನ ನಾಯಕರು ವ್ಯಕ್ತಪಡಿಸಿದ ಅಭಿಪ್ರಾಯಗಳ ಕುರಿತಾದ ಮಾಹಿತಿ ವಿವರ ಓದಿ ಪ್ರಶಂಸೆ ವ್ಯಕ್ತ ಪಡಿಸಿದರು. ಅರ್ಧ ಗಂಟೆಗೂ ಹೆಚ್ಚು ಕಾಲ ವೀಕ್ಷಿಸಿದ ಅವರು ಇಲ್ಲಿನ ಬಹುಮೂಲ್ಯ ಸಂಗ್ರಹದ ಬಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ […]

ಮಳೆಯ ಅಭಾವ: ನೀರು ಪೋಲಾಗದಂತೆ ಕ್ರಮ ಕೈಗೊಳ್ಳಲು ಜಿ. ಪಿ. ಸಿಇಓ ರಾಹುಲ ಶಿಂಧೆ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ನದಿ ಮತ್ತು ಕೆರೆಗಳಲ್ಲಿನ ಅತr  ಕೆಳಗಿನ ನೀರನ್ನು ಸಂಸ್ಕರಿಸಿ ಗ್ರಾಮೀಣ ಭಾಗದ ಪ್ರದೇಶಗಳಿಗೆ ಕುಡಿಯಲು ಪೂರೈಕೆ ಮಾಡಲಾಗುತ್ತಿರುವುದರಿಂದ ಜನರು ನೀರನ್ನು ಆದಷ್ಟು ಕಾಯಿಸಿ ಆರಿಸಿ ಉಪಯೋಗಿಸಬೇಕು ಹಾಗೂ ನೀರು ಅನಗತ್ಯವಾಗಿ ಪೋಲು ಮಾಡದೇ ಸಮರ್ಪಕವಾಗಿ ಬಳಸಿಕೊಳ್ಳುವಂತೆ ಗ್ರಾಮೀಣ ಭಾಗದ ಜನರಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಗಳ ಜಲಮೂಲಗಳಾದ ಕೃμÁ್ಣ, ಭೀಮಾ ನದಿಯಲ್ಲಿ […]

ಸಾಗುವಳಿ ಜಮೀನನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ

ವಿಜಯಪುರ: ವಿಜಯಪುರ, ಇಂಡಿ, ಸಿಂದಗಿ ಮತ್ತು ಬಸವನ ಬಾಗೇವಾಡಿ ತಾಲೂಕುಗಳಲ್ಲಿ ಬಡ ರೈತರು ಸರಕಾರಿ ಪಡಾ ಜಮೀನನ್ನು ಸುಮಾರು 20 ರಿಂದ 30 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದು, ಇದನ್ನು ಸಕ್ರಮಗೊಳಿಸಿ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಸಂಘಟನೆ ಮುಖಂಡರು ಮತ್ತು ಕಾರ್ಯಕರ್ತರು ಸರ್ಕಾರದ ಆದೇಶದಂತೆ ಅಕ್ರಮ ಸಾಗುವಳಿ ಜಮೀನನ್ನು ಸಕ್ರಮಗೊಳಿಸಿ ಹಕ್ಕು ಪತ್ರ ವಿತರಿಸಬೇಕು ಎಂದು ಆಗ್ರಹಿಸಿದರು.  ಅಲ್ಲದೇ, ಅಪರ ಜಿಲ್ಲಾಧಿಕಾರಿ […]