ಗಾಂಧಿ ಭವನ ವೀಕ್ಷಿಸಿದ ರಾಜ್ಯ ಹೈಕೋರ್ಟ್ ನ್ಯಾ. ಎಚ್. ಪಿ. ಸಂದೇಶ

ವಿಜಯಪುರ:  ಕರ್ನಾಟಕ ಹೈಕೋರ್ಟಿನ ನ್ಯಾಯಮೂರ್ತಿಗಳಾದ ಎಚ್. ಪಿ. ಸಂದೇಶ್ ಅವರು ಕುಟುಂಬದೊಂದಿಗೆ ಶುಕ್ರವಾರ ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗಾಂಧಿ ಭವನಕ್ಕೆ ಭೇಟಿ ನೀಡಿ ವೀಕ್ಷಿಸಿದರು.

ಗಾಂಧಿ ಪ್ರತಿಮೆ,ಗಾಂಧೀ ವಿಚಾರ ಧಾರೆಗಳ ಕುರಿತ ಮಾಹಿತಿ ವಿವರ, ಗಾಂಧಿಜಿ ಕುರಿತ ಜಗತ್ತಿನ ನಾಯಕರು ವ್ಯಕ್ತಪಡಿಸಿದ ಅಭಿಪ್ರಾಯಗಳ ಕುರಿತಾದ ಮಾಹಿತಿ ವಿವರ ಓದಿ ಪ್ರಶಂಸೆ ವ್ಯಕ್ತ ಪಡಿಸಿದರು. ಅರ್ಧ ಗಂಟೆಗೂ ಹೆಚ್ಚು ಕಾಲ ವೀಕ್ಷಿಸಿದ ಅವರು ಇಲ್ಲಿನ ಬಹುಮೂಲ್ಯ ಸಂಗ್ರಹದ ಬಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗಾಂಧಿ ಭವನದ ಸದಸ್ಯರಾದ ಪೀಟರ್ ಅಲೆಕ್ಸಾಂಡರ್, ನೇತಾಜಿ ಗಾಂಧಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌