ಬದರುದ್ದೀನ್ ಅ. ಸೌದಾಗರ ವಿಜಯಪುರ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕಾರ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಬದರುದ್ದೀನ್ ಅ. ಸೌದಾಗರ ಅವರನ್ನು ಸರಕಾರ ವರ್ಗವಾಣೆ ಮಾಡಿದ್ದು, ಅವರು ಈಗಾಗಲೇ ಅಧಿಕಾರ ಸ್ವೀಕರಿಸಿದ್ದಾರೆ. ಬಳ್ಳಾರಿಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಅವರನ್ನು ಸರಕಾರ ವಿಜಯಪುರಕ್ಕೆ ವರ್ಗಾವಣೆ ಮಾಡಿದೆ.  ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ವಿಜಯ ಮೆಕ್ಕಳಕಿ ಅವರನ್ನು ವಿಜಯಪುರದಿಂದ ಪೌರಾಡಳಿತ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು, ಯಾವುದೇ ಸ್ಥಳ ತೋರಿಸಿಲ್ಲ. ನೂತನ ಆಯುಕ್ತರನ್ನು ವಿಜಯಪುರ ಮಹಾನಗರ ಪಾಲಿಕೆಯ ಎಲ್ಲ ಸಿಬ್ಬಂದಿ ಬರಮಾಡಿಕೊಂಡು ಸ್ವಾಗತ ಕೋರಿದ್ದಾರೆ.  ಬದರುದ್ದೀನ್ ಅ. ಸೌದಾಗರ ಅವರು […]

ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಜಯಂತಿ ಆಚರಣೆ- ಹಳಕಟ್ಟಿ ಕುಟುಂಬಸ್ಥರು, ಅಪರ ಜಿಲ್ಲಾಧಿಕಾರಿ ಭಾಗಿ

ವಿಜಯಪುರ: ವಚನಪಿತಾಮಹ ಡಾ. ಫ.ಗು.ಹಳಕಟ್ಟಿ ಜಯಂತಿಯನ್ನು ನಗರದ ಬಿ.ಎಲ್.ಡಿ.ಇ. ಸಂಸ್ಥೆಯಲ್ಲಿ ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿರುವ ಸಂಶೋಧನ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಳಕಟ್ಟಿಯವರ ಸಮಾಧಿಗೆ ಗಣ್ಯರು ನಮನ ಸಲ್ಲಿಸಿದರು. ಅಲ್ಲದೇ ಹಳಕಟ್ಟಿಯವರ ಭಾವಚಿತ್ರ ಹಾಗೂ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಳಕಟ್ಟಿಯವರ ಮರಿಮೊಮ್ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಿ.ಎಲ್.ಡಿ.ಇ. ಸಂಸ್ಥೆಯ ವತಿಯಿಂದ ಮುಖ್ಯ ಆಡಳಿತಾಧಿಕಾರಿ ಡಾ. ಆರ್.ಬಿ.ಕೊಟ್ನಾಳ ಅವರು ಹಳಕಟ್ಟಿಯವರ ಕುಟುಂಬಸ್ಥರಿಗೆ ಗೌರವಧನದ ಚೆಕ್ ವಿತರಿಸಿದರು. ಹಳಕಟ್ಟಿಯವರ ಮೊಮ್ಮಗ ಗಿರೀಶ ಹಳಕಟ್ಟಿ, ಅವರ ಪತ್ನಿ ಸುಜಾತಾ ಹಳಕಟ್ಟಿ […]