ಬದರುದ್ದೀನ್ ಅ. ಸೌದಾಗರ ವಿಜಯಪುರ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕಾರ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಬದರುದ್ದೀನ್ ಅ. ಸೌದಾಗರ ಅವರನ್ನು ಸರಕಾರ ವರ್ಗವಾಣೆ ಮಾಡಿದ್ದು, ಅವರು ಈಗಾಗಲೇ ಅಧಿಕಾರ ಸ್ವೀಕರಿಸಿದ್ದಾರೆ.

ಬಳ್ಳಾರಿಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಅವರನ್ನು ಸರಕಾರ ವಿಜಯಪುರಕ್ಕೆ ವರ್ಗಾವಣೆ ಮಾಡಿದೆ.  ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ವಿಜಯ ಮೆಕ್ಕಳಕಿ ಅವರನ್ನು ವಿಜಯಪುರದಿಂದ ಪೌರಾಡಳಿತ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು, ಯಾವುದೇ ಸ್ಥಳ ತೋರಿಸಿಲ್ಲ.

ನೂತನ ಆಯುಕ್ತರನ್ನು ವಿಜಯಪುರ ಮಹಾನಗರ ಪಾಲಿಕೆಯ ಎಲ್ಲ ಸಿಬ್ಬಂದಿ ಬರಮಾಡಿಕೊಂಡು ಸ್ವಾಗತ ಕೋರಿದ್ದಾರೆ.  ಬದರುದ್ದೀನ್ ಅ. ಸೌದಾಗರ ಅವರು ಅಧಿಕಾರ ವಹಿಸಿಕೊಳ್ಳುವ ಸಂದರ್ಭದಲ್ಲಿ ನಗರದ ಗಣ್ಯರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌