ಮತದಾರರ ಪಟ್ಟಿ ಪರಿಷ್ಕರಿಸಿ ಗೊಂದಲ ನಿವಾರಿಸಲು ಆಗ್ರಹ- ಜಿಲ್ಲಾ ಚುನಾವಣಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅದ್ಯಕ್ಷ, ಉಪಾಧ್ಯಕ್ಷ ಚುನಾವಣೆಗಳು ನಡೆಯಲಿದ್ದು, ಈ ಚುನಾವಣೆಯಲ್ಲಿ ಯಾವುದೇ ಲೋಪವಾಗದಂತೆ ತಡೆಯಲು ಮತದಾರರ ಪಟ್ಟಿ ಪರಿಷ್ಕರಿಸಬೇಕು ಎಂದು ಆಗ್ರಹಿಸಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸಮಾಜ ಸೇವಾ ಸಮಿತಿ ವತಿಯಿಂದ ಜಿಲ್ಲಾ ಚುನಾವಣಾಧಿಕಾರಗೆ ಮನವಿ ಪತ್ರ ಸಲ್ಲಿಸಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಮುಖಂಡ ಮಲ್ಲಿಕಾರ್ಜುನ ಕೆಂಗನಾಳ, ಮುಂಬರುವ ಚುನಾವಣೆಗಳಲ್ಲಿ ಮತದಾರ ಪಟ್ಟಿಯಲ್ಲಿ ಯಾವುದೇ ಗೊಂದಲವಾಗಬಾರದು.  ಚುನಾವಣೆಗಳಲ್ಲಿ ಸ್ಪರ್ಧಿಸುವ ಸ್ಪರ್ಧಿಗಳಿಗೆ ಯಾವುದೇ ತರಹದ ಅನ್ಯಾಯ […]

ಬಸವನ ಬಾಗೇವಾಡಿ ತಾಲೂಕಿಗೆ ಭೇಟಿ ನೀಡಿ ನಾನಾ ಕಾಮಗಾರಿಗಳನ್ನು ಪರಿಶೀಲಿಸಿದ ಜಿ. ಪಂ ಸಿಇಓ ರಾಹುಲ ಶಿಂಧೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಾಹುಲ ಶಿಂಧೆ ಅವರು ಬಸವನ ಬಾಗೇವಾಡಿ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ, ನಾನಾ ಯೋಜನೆಗಳ ಕಾಮಗಾರಿ ಪರಿಶೀಲನೆ ನಡೆಸಿದರು.  ಉಕ್ಕಲಿ ಗ್ರಾಮದ ಸರಕಾರಿ ಉರ್ದು ಶಾಲೆಯ ಪ್ರಗತಿಯಲ್ಲಿರುವ ಶಾಲಾ ಕೊಠಡಿ, ನರೇಗಾ ಯೋಜನೆಯಲ್ಲಿ ನಿರ್ಮಾಣಗೊಂಡಿರುವ ಅಡುಗೆ ಕೊಠಡಿ ವೀಕ್ಷಿಸಿದರು.ಎನ್.ಆರ್.ಎಲ್.ಎಮ್ ಯೋಜನೆಯಡಿ ಸಿದ್ಧಪಡಿಸಿರುವ ಸಮವಸ್ತ್ರಗಳನ್ನು ಪಡೆದುಕೊಂಡು, ಅಡುಗೆಯವರ ಹಾಗೂ ಅಡುಗೆ ಸಹಾಯಕರಿಗೆ ವಿತರಿಸುವಂತೆಯೂ ಸಮವಸ್ತ್ರಗಳನ್ನು ಶುಚಿಗೊಳಿಸಿ ಸಮವಸ್ತ್ರ ಬಳಸುವಂತೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸೂಚಿಸಿದ ಅವರು, ಶಾಲೆಯ ಸ್ಮಾರ್ಟ್ ಕ್ಲಾಸ್ […]

ಶ್ರೀಗಂಧದ ಮರ ಇಬ್ಬರು ಕಳ್ಳರಿಗೆ 5 ವರ್ಷ ಜೈಲು, ತಲಾ ರೂ. 1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ- ಎಸ್. ಎಚ್. ಹಕೀಂ

ವಿಜಯಪುರ: ಶ್ರೀಗಂಧದ ಮರ ಕಳ್ಳತನ ಮಾಡಿದ ಆರೋಪಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐದು ವರ್ಷ ಜೈಲು ಶಿಕ್ಷೆ ಮತ್ತು ರೂ. 2 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ. ಈ ಕುರಿತು ಮಾದ್ಯಮ ಪ್ರಕಟಣೆ ನೀಡಿರುವ ಪ್ರಧಾನ ಸರಕಾರಿ ಅಭಿಯೋಜಕ ಎಸ್. ಎಚ್. ಹಕೀಂ, ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದ ದಸ್ತಗೀರ ಜಾಫರಸಾಬ ಚಂದನ ಮತ್ತು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದ ಹಾಜಿಮಲಂಗ ಮೈಬೂಬಸಾಬ ವಾಲಿಕಾರ ಅವರಿಗೆ ಶಿಕ್ಷೆ […]