ಮತದಾರರ ಪಟ್ಟಿ ಪರಿಷ್ಕರಿಸಿ ಗೊಂದಲ ನಿವಾರಿಸಲು ಆಗ್ರಹ- ಜಿಲ್ಲಾ ಚುನಾವಣಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅದ್ಯಕ್ಷ, ಉಪಾಧ್ಯಕ್ಷ ಚುನಾವಣೆಗಳು ನಡೆಯಲಿದ್ದು, ಈ ಚುನಾವಣೆಯಲ್ಲಿ ಯಾವುದೇ ಲೋಪವಾಗದಂತೆ ತಡೆಯಲು ಮತದಾರರ ಪಟ್ಟಿ ಪರಿಷ್ಕರಿಸಬೇಕು ಎಂದು ಆಗ್ರಹಿಸಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸಮಾಜ ಸೇವಾ ಸಮಿತಿ ವತಿಯಿಂದ ಜಿಲ್ಲಾ ಚುನಾವಣಾಧಿಕಾರಗೆ ಮನವಿ ಪತ್ರ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಮುಖಂಡ ಮಲ್ಲಿಕಾರ್ಜುನ ಕೆಂಗನಾಳ, ಮುಂಬರುವ ಚುನಾವಣೆಗಳಲ್ಲಿ ಮತದಾರ ಪಟ್ಟಿಯಲ್ಲಿ ಯಾವುದೇ ಗೊಂದಲವಾಗಬಾರದು.  ಚುನಾವಣೆಗಳಲ್ಲಿ ಸ್ಪರ್ಧಿಸುವ ಸ್ಪರ್ಧಿಗಳಿಗೆ ಯಾವುದೇ ತರಹದ ಅನ್ಯಾಯ ಆಗಬಾರದು.  ಈ ಹಿನ್ನೆಲೆಯಲ್ಲಿ ಈಗ ಗೊಂದಲದ ಗೂಡಾಗಿರುವ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದು ಆಗ್ರಹಿಸಿದರು.

2023ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಹಲವಾರು ಕಡೆ ಮತದಾರರ ಪಟ್ಟಿಯಲ್ಲಿ ಎರಡೆರಡು ಹೆಸರುಗಳಿದ್ದು, ಎರಡು ಕಡೆ ಮತದಾನ ನಡೆದಿವೆ.  ಇದು ಇಡೀ ರಾಜ್ಯದ ಜನತೆಗೆ ಗೊತ್ತಿರುವ ವಿಷಯವಾಗಿದೆ.  ಇದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ.  ಈಗ ಕೂಡಲೇ ಎಚ್ಚೆತ್ತುಕೊಂಡು ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷ ನಿಯಾಜ ಅಹ್ಮದ ಗೋಡಿಹಾಳ, ಮಲ್ಲಿಕಾರ್ಜುನ ಎಂ. ಕನ್ನೂರ, ರಮಜಾನ ಶೇಖ, ಮೆಹಬೂಬಲ ಮಾಲಬಾವಡಿ, ಅಮರೇಶ ತಿಲಿಯಾಳ, ಶಶಿಕಾಂತ ಎನ್. ಹೂಗಾರ, ಬಾದಶಾ ಕೆ. ಪಠಾಣ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌