ವಿಜಯಪುರ ನೂತನ ಡಿಸಿಯಾಗಿ ಭೂಬಾಲನ ಟಿ. ಅಧಿಕಾರ ಸ್ವೀಕಾರ- ಡಾ. ದಾನಮ್ಮನವರ ವರ್ಗಾವಣೆ

ವಿಜಯಪುರ: ನೂತನ ಜಿಲ್ಲಾಧಿಕಾರಿಯಾಗಿ ಭೂಬಾಲನ ಟಿ. ಅಧಿಕಾರ ಸ್ವೀಕಾರಿಸಿದ್ದಾರೆ.
ಸರಕಾರ ವರ್ಗಾವಣೆ ಆದೇಶ ಹೊರಡಿಸಿದ ತಕ್ಷಣವೇ ವಿಜಯಪುರಕ್ಕೆ ಆಗಮಿಸಿದ ಭೂಬಾಲನ ಟಿ. ಅಧಿಕಾರ ಸ್ವೀಕರಿಸಿದರು.  ನಿರ್ಗಮಿತ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ನೂತನ ಡಿಸಿಯನ್ನು ಸ್ವಾಗತಿಸಿ ಬರಮಾಡಿಕೊಂಡರು.  ನಂತರ ಅಧಿಕಾರ ಹಸ್ತಾಂತರಿಸಿದರು.
ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಭೂಬಾಲನ ಟಿ. ಅಧಿಕಾರ ಸ್ವೀಕರಿಸಿದರು. ನಿರ್ಗಮಿತಿ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರ ಹಸ್ತಾಂತರಿಸಿದರು

ನೂತನ ಜಿಲ್ಲಾಧಿಕಾರಿ ಹಿನ್ನೆಲೆ

ಭೂಬಾಲನ ಟಿ.  ಅವರು ಈವರೆಗೆ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿದ್ದರು.  ವರ್ಗಾವಣೆ ಆದೇಶ ಹೊರಬರುತ್ತಿದ್ದಂತೆ ವಿಜಯಪುರಕ್ಕೆ ಬಂದು ಅಧಿಕಾರ ಸ್ವೀಕರಿಸಿದರು.
2015ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ಅವರು 3 ವರ್ಷಗಳ ಕಾಲ ಬಾಗಲಕೋಟ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದರು.  ಇದಕ್ಕೂ ಮುಂಚೆ ಭೂಬಾಲನ್ ಟಿ ಅವರು, ಬೀದರ ಮತ್ತು ದಾವಣಗೆರೆಯಲ್ಲಿ ಪ್ರೊಬೆಷನರಿಯಾಗಿ, ಹರಪನಹಳ್ಳಿ ಮತ್ತು ಉಡುಪಿಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.  ನಂತರ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ, ಸ್ಮಾರ್ಟ ಸಿಟಿ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.  ಅಷ್ಟೇ ಅಲ್ಲ, ಚುನಾವಣೆ ಸಂದರ್ಭದಲ್ಲಿ ಬೆಳಗಾವಿ ವಿಶೇಷ ಜಿಲ್ಲಾಧಿಕಾರಿಗಳಾಗಿಯೂ ಅವರು ಕೆಲಸ ಮಾಡಿದ್ದಾರೆ.

Leave a Reply

ಹೊಸ ಪೋಸ್ಟ್‌