ವಿಶ್ವ ಜನಸಂಖ್ಯಾ ದಿನ ಆಚರಣೆ: ಜನಸಂಖ್ಯೆ ನಿಯಂತ್ರಣ ಅತ್ಯವಶ್ಯಕ- ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ

ವಿಜಯಪುರ: ಶರವೇಗದಿಂದ ಬೆಳೆಯುತ್ತಿರುವ ಜನಸಂಖ್ಯೆ ಅಪಾಯದ ಸಂಕೇತ ಮತ್ತು ಅಭಿವೃದ್ದಿಗೆ ಮಾರಕವಾಗಿದ್ದು, ಜನಸಂಖ್ಯೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದ್ದಾರೆ. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ನಗರ ಆರೋಗ್ಯ ಕೇಂದ್ರ ನವಬಾಗ ಹಾಗೂ ಸರಕಾರಿ ಬಾಲಕೀಯರ ಪದವಿಪೂರ್ವ ಕಾಲೇಜ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ ವಿಶ್ವಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜನಸಂಖ್ಯೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಜನಸಂಖ್ಯೆ ಹೆಚ್ಚಳಕ್ಕೆ ಅನಕ್ಷರತೆ ಪ್ರಮಾಣದಲ್ಲಿ ಹೆಚ್ಚಳ, ಬೇಗ ಮದುವೆ, ಗಂಡು ಮಗು ಬೇಕೆಂಬ ಹಂಬಲ, ಮೂಡನಂಬಿಕೆ, ಜನನ ಹಾಗೂ ಮರಣಗಳ ನಡುವಿನ ಅಂತರವೇ ಕಾರಣವಾಗಿದ್ದು, ಜನಸಂಖ್ಯೆ ನಿಯಂತ್ರಣಕ್ಕೆ ಪ್ರಯತ್ನಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯಿಂದ ಜನಸಂಖ್ಯೆ ನಿಯಂತ್ರಣಕ್ಕೆ ಪ್ರಯತ್ನಿಸಬೇಕು ಎಂದು ಹೇಳಿದರು.

ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಉದ್ಘಾಟಿಸಿದರು

ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿದ್ದ ಬಿಎಲ್‌ಡಿಇ ಸಂಸ್ಥೆಯ ಡಾ. ತನುಜಾ ಪಟ್ನಾಕರ ಅವರು ಮಾತನಾಡಿ, ಜನಸಂಖ್ಯೆ ನಿಯಂತ್ರಣದಿAದ  ದೇಶಕ್ಕೆ ಮಾರಕವಾಗಿರುವ ಬಡತನ ಹಾಗೂ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಶಾಶ್ವತವಾದ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದ ಅವರು, ಜನಸಂಖ್ಯೆ ನಿಯಂತ್ರಣಕ್ಕೆ ಶಾಶ್ವತ ವಿಧಾನವಾದ ಟೋಬೆಕ್ಟಮಿ, ಲೇಪ್ರಸ್ಕೋಪಿಕ್, ಎನ್.ಎಸ್.ವಿ. ಹಾಗೂ ತಾತ್ಕಾಲಿಕ ವಿಧಾನಗಳಾದ ಐ.ಯು.ಡಿ., ಓ.ಪಿ., ನಿರೋಧ, ಚುಚ್ಚು ಮದ್ದುಗಳ ಕುರಿತು ವಿಸ್ತಾರವಾಗಿ ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಎಫ್. ಡಬ್ಲೂ ಅಧಿಕಾರಿ ಡಾ. ರಾಜೇಶ್ವರಿ ಗೊಲಗೇರಿ ಅವರು, ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ೧೯೮೭ರಿಂದ ಪ್ರತಿ ವರ್ಷ ಜುಲೈ ೧೧ರಂದು ಆಚರಿಸುತ್ತ ಬರಲಾಗುತ್ತಿದೆ. ಈ ವರ್ಷ ‘ಕುಟುಂಬ ಕಲ್ಯಾಣ ನಿಭಾಯಿಸುವ ಜವಾಬ್ದಾರಿ’ ಎಂಬ ಘೋಷಣೆಯೊಂದಿಗೆ ಆಚರಿಸಲಾಗುತ್ತಿದೆ. ತಾಯಿ ಮತ್ತು ಆರೋಗ್ಯದ ಪೂರ್ಣ ತಯಾರಿ, ಜನಸಂಖ್ಯಾ ತಡೆಯಲು ಇರುವ ಮಾರ್ಗಗಳು, ಜನಸಂಖ್ಯೆಯಿAದಾಗು ದುಷ್ಪರಿಣಾಮಗಳು, ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕ ಸಮಸ್ಯೆಗಳ ಕುರಿತು ಅವರು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜ್ ಪ್ರಾಚಾರ್ಯರಾದ ಸಿ.ಬಿ.ನಾಟೀಕರ ಅವರು ಮಾತನಾಡಿದರು. ಡಾ.ಜೈಬುನ್ನಿಸಾ ಬೀಳಗಿ, ಡಾ.ಕವಿತಾ ದೊಡಮನಿ, ಡಾ.ಪಿ.ಎ.ಹಿಟ್ನಳ್ಳಿ, ಜಿ.ಎಂ.ಕೋಲೂರ, ಬಿ.ಪಿ.ಜಕ್ಕನಗೌಡರ, ಗುರುಪುತ್ರ, ಎಸ್.ಎಂ.ಕುAಬಾರ, ಆರ್.ಎಂ.ಅರಕೇರಿ ಸೇರಿದಂತೆ ವಿದ್ಯಾರ್ಥಿಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇದ್ದಕೂ ಮೊದಲು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಹಮ್ಮಿಕೊಂಡ ಜನಜಾಗೃತಿ ಜಾಥಾಕ್ಕೆ  ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹಾಗೂ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜಕುಮಾರ ಯರಗಲ್ ಜಂಟಿಯಾಗಿ  ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.  ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊAಡ ಜನಜಾಗೃತಿ ರ‍್ಯಾಲಿಯು ಗಾಂಧಿವೃತ್ತದ ಮಾರ್ಗವಾಗಿ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜ್‌ವರೆಗೆ ಸಂಚರಿಸಿತು. ಜಾಥಾದಲ್ಲಿ ವಿದ್ಯಾರ್ಥಿಗಳು ಇತರರು ಭಾಗವಹಿಸಿದ್ದರು.

Leave a Reply

ಹೊಸ ಪೋಸ್ಟ್‌